<p><strong>ವಡಗೇರಾ</strong>: ‘ಟಿವಿ ಮೊಬೈಲ್ಗಳ ಹಾವಳಿಯಿಂದ ಗ್ರಾಮೀಣ ಪ್ರದೇಶದ ಅಪ್ಪಟ ಕಲೆಗಳಾದ ಬಯಲಾಟ, ಪೌರಾಣಿಕ ನಾಟಕ ಹಾಗೂ ಸಾಮಾಜಿಕ ಕಥೆಗಳು ನಶಿಸಿ ಹೋಗುತ್ತಿವೆ’ ಎಂದು ಕಾಡಂಗೇರಾ (ಬಿ) ಬಸಯ್ಯಸ್ವಾಮಿ ಹಿರೇಮಠ ಕಳವಳ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಕಾಡಂಗೇರಾ(ಬಿ) ಗ್ರಾಮದಲ್ಲಿ ಶ್ರೀ ಗುರು ಪುಟ್ಟರಾಜ ಸಂಗೀತ ಸಾಹಿತ್ಯ ಸಾಂಸ್ಕೃತಿಕ ಕಲಾ ಸೇವಾ ಸಂಸ್ಥೆ ಟೋಕಾಪೂರ ವತಿಯಿಂದ ಹಮ್ಮಿಕೊಂಡಿದ್ದ ಪೌರಾಣಿಕ ಗುರು-ಶಿಷ್ಯ ಎಂಬ ನಾಟಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹಿಂದಿನ ಕಾಲದಲ್ಲಿ ಪೌರಾಣಿಕ ಕಥೆ ಬಯಲಾಟ, ಸಾಮಾಜಿಕ ನಾಟಕಗಳು ಮನುಷ್ಯನ ನಿಜ ಜೀವನದ ಭಾಗವಾಗಿದ್ದವು. ಇಂದಿನ ಯುವಕರಿಗೆ ಗ್ರಾಮೀಣ ಕಲೆಯ ಬಗ್ಗೆ ಮನವರಿಕೆ ಮಾಡಿಕೊಡುವದರ ಜತೆಗೆ ಗ್ರಾಮೀಣ ಸೊಗಡಿನ ಕಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದರು.</p>.<p>ಪಂಡಿತ್ ನಾಗಮೂರ್ತಿ ಮಾತನಾಡಿ, ‘ಸರ್ಕಾರ ಗ್ರಾಮೀಣ ಭಾಗದ ಬಯಲಾಟ, ನಾಟಕ ಹಾಗೂ ಜಾನಪದ ಕಲಾವಿದರಿಗೆ ಪ್ರೋತ್ಸಾಹಿಸಬೇಕು’ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಮಾಳಪ್ಪ, ಗ್ರಾ.ಪಂ. ಉಪಾಧ್ಯಕ್ಷ ವಿಶ್ವನಾಥರೆಡ್ಡಿ, ಹಣಮಂತ ಅಜ್ಜಪ್ಪನೂರ, ಲಕ್ಷ್ಮಣ , ದೊಡ್ಡಪ್ಪ ಕಾಕಲಕಾರ, ಗ್ರಾ.ಪಂ. ಸದಸ್ಯರಾದ ರಾಜಶೇಖರ ಚಾಮನಾಳ, ಸಿದ್ದಪ್ಪ ಸುಕುಲಿ, ನಾಗಪ್ಪ, ರೆಡ್ಡಪ್ಪ ಕಲಾಲ್, ದೊಡ್ಡಪ್ಪ ನಾಯ್ಕೋಡಿ, ಕಲಾವಿದರು ಇತರರು ಉಪಸ್ಥಿತರಿದ್ದರು.</p>.<p>ಕಾರ್ಯಕ್ರಮವನ್ನು ತಮ್ಮಣ್ಣ ನಿರೂಪಿಸಿದರು, ರಾಘವೇಂದ್ರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ</strong>: ‘ಟಿವಿ ಮೊಬೈಲ್ಗಳ ಹಾವಳಿಯಿಂದ ಗ್ರಾಮೀಣ ಪ್ರದೇಶದ ಅಪ್ಪಟ ಕಲೆಗಳಾದ ಬಯಲಾಟ, ಪೌರಾಣಿಕ ನಾಟಕ ಹಾಗೂ ಸಾಮಾಜಿಕ ಕಥೆಗಳು ನಶಿಸಿ ಹೋಗುತ್ತಿವೆ’ ಎಂದು ಕಾಡಂಗೇರಾ (ಬಿ) ಬಸಯ್ಯಸ್ವಾಮಿ ಹಿರೇಮಠ ಕಳವಳ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಕಾಡಂಗೇರಾ(ಬಿ) ಗ್ರಾಮದಲ್ಲಿ ಶ್ರೀ ಗುರು ಪುಟ್ಟರಾಜ ಸಂಗೀತ ಸಾಹಿತ್ಯ ಸಾಂಸ್ಕೃತಿಕ ಕಲಾ ಸೇವಾ ಸಂಸ್ಥೆ ಟೋಕಾಪೂರ ವತಿಯಿಂದ ಹಮ್ಮಿಕೊಂಡಿದ್ದ ಪೌರಾಣಿಕ ಗುರು-ಶಿಷ್ಯ ಎಂಬ ನಾಟಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹಿಂದಿನ ಕಾಲದಲ್ಲಿ ಪೌರಾಣಿಕ ಕಥೆ ಬಯಲಾಟ, ಸಾಮಾಜಿಕ ನಾಟಕಗಳು ಮನುಷ್ಯನ ನಿಜ ಜೀವನದ ಭಾಗವಾಗಿದ್ದವು. ಇಂದಿನ ಯುವಕರಿಗೆ ಗ್ರಾಮೀಣ ಕಲೆಯ ಬಗ್ಗೆ ಮನವರಿಕೆ ಮಾಡಿಕೊಡುವದರ ಜತೆಗೆ ಗ್ರಾಮೀಣ ಸೊಗಡಿನ ಕಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದರು.</p>.<p>ಪಂಡಿತ್ ನಾಗಮೂರ್ತಿ ಮಾತನಾಡಿ, ‘ಸರ್ಕಾರ ಗ್ರಾಮೀಣ ಭಾಗದ ಬಯಲಾಟ, ನಾಟಕ ಹಾಗೂ ಜಾನಪದ ಕಲಾವಿದರಿಗೆ ಪ್ರೋತ್ಸಾಹಿಸಬೇಕು’ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಮಾಳಪ್ಪ, ಗ್ರಾ.ಪಂ. ಉಪಾಧ್ಯಕ್ಷ ವಿಶ್ವನಾಥರೆಡ್ಡಿ, ಹಣಮಂತ ಅಜ್ಜಪ್ಪನೂರ, ಲಕ್ಷ್ಮಣ , ದೊಡ್ಡಪ್ಪ ಕಾಕಲಕಾರ, ಗ್ರಾ.ಪಂ. ಸದಸ್ಯರಾದ ರಾಜಶೇಖರ ಚಾಮನಾಳ, ಸಿದ್ದಪ್ಪ ಸುಕುಲಿ, ನಾಗಪ್ಪ, ರೆಡ್ಡಪ್ಪ ಕಲಾಲ್, ದೊಡ್ಡಪ್ಪ ನಾಯ್ಕೋಡಿ, ಕಲಾವಿದರು ಇತರರು ಉಪಸ್ಥಿತರಿದ್ದರು.</p>.<p>ಕಾರ್ಯಕ್ರಮವನ್ನು ತಮ್ಮಣ್ಣ ನಿರೂಪಿಸಿದರು, ರಾಘವೇಂದ್ರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>