‘ರೈಲ್ವೆ ನಿಲ್ದಾಣ ರಸ್ತೆಯ ತರಕಾರಿ ಮಾರುಕಟ್ಟೆಯಿಂದ ರೈಲು ನಿಲ್ದಾಣವರೆಗೆ ರಸ್ತೆ ಇಕ್ಕಟ್ಟಾಗಿದ್ದು, ವಾಹನಗಳು ಮುಖಾಮುಖಿಯಾದರೆ ಸಂಚಾರ ದಟ್ಟಣೆ ಉಂಟಾಗುತ್ತದೆ. ಅಲ್ಲದೇ ಪಾರ್ಕಿಂಗ್ಗಾಗಿ ಜಾಗ ಗುರುತಿಸಿದ್ದರೂ ವಾಹನಗಳನ್ನು ಅಡ್ಡಾಡಿದ್ದಿಯಾಗಿ ನಿಲ್ಲಿಸಲಾಗುತ್ತಿದೆ. ಕೂಡಲೇ ಸಂಚಾರ ಪೊಲೀಸರು ಕ್ರಮ ಕೈಗೊಳ್ಳಬೇಕು’ ಎಂದು ಪ್ರಯಾಣಿಕರಾದ ಬಸವರಾಜ ಪಾಟೀಲ, ಅಶೋಕ ದೊಡ್ಡಮನಿ, ಹಣಮಂತ, ಮಹೇಶ ಒತ್ತಾಯಿಸಿದ್ದಾರೆ.