<p><strong>ಶಹಾಪುರ</strong>: ‘ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸದ ಕಾರಣ ಅಪಘಾತಗಳು ಹೆಚ್ಚುತ್ತಿವೆ. ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು. ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಮಾನವೀಯತೆ ದೃಷ್ಟಿಯಿಂದ ಅಪಘಾತಕ್ಕೆ ಒಳಗಾದವರನ್ನು ರಕ್ಷಿಸಲು ಸಹಾಯ ಮಾಡಬೇಕು’ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ ಹೇಳಿದರು.</p>.<p>ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ 32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಅಪಘಾತಗಳು ಹೇಳಿ–ಕೇಳಿ ಬರುವುದಿಲ್ಲ. ಸಾರಿಗೆ ಇಲಾಖೆ ರೂಪಿಸಿರುವ ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಸೀಟ್ಬೆಲ್ಟ್, ಹೆಲ್ಮೆಟ್ ಧರಿಸಬೇಕು. ದ್ವಿಚಕ್ರ ವಾಹನದಲ್ಲಿ ಇಬ್ಬರಿಗಿಂತ ಹೆಚ್ಚು ಜನ ಪ್ರಯಾಣಿಸಬಾರದು. ಅನಾವಶ್ಯಕವಾಗಿ ಇತರ ವಾಹನಗಳನ್ನು ಹಿಂದಿಕ್ಕುವ ಪ್ರಯತ್ನ ಮಾಡಬೇಡಿ’ ಎಂದು ಸಲಹೆ ನೀಡಿದರು.</p>.<p>‘ಹೊಸ ಕಾಯ್ದೆಯಂತೆ ಮದ್ಯ ಸೇವಿಸಿ ವಾಹನ ಚಲಾಯಿಸಿದರೆ ₹10 ಸಾವಿರ ದಂಡ ವಿಧಿಸಲಾಗುತ್ತದೆ. ವಾಹನ ಚಲಾಯಿಸುವಾಗ ಮೊಬೈಲ್ ಬಳಸುವುದು ಅಪಾಯಕಾರಿ. ಏಕಾಗ್ರತೆ ಕಳೆದುಕೊಳ್ಳುವುದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚು. ಪರವಾನಗೆ ಹಾಗೂ ವಿಮೆ ಮಾಡಿಸುವುದು ಕಡ್ಡಾಯ’ ಎಂದರು.</p>.<p>ಕಾಲೇಜಿನ ಪ್ರಾಚಾರ್ಯ ಪ್ರೊ.ಚೆನ್ನಾರಡ್ಡಿ ತಂಗಡಗಿ, ತಹಶೀಲ್ದಾರ್ ಜಗನಾಥರೆಡ್ಡಿ, ಪಿಎಸ್ಐ ಚಂದ್ರಕಾಂತ ಮೆಕಾಲೆ, ಮೋಟಾರ್ ವಾಹನ ನಿರೀಕ್ಷಕ ವೆಂಕಟಪ್ಪ ಕಲಾಲ್, ಆನಂದ ಕುಮಾರ ಜೋಷಿ, ಡಾ.ಶರಣಪ್ಪ ಸಂಘರ್ಷ, ರಾಮಕೃಷ್ಣ ಮಿರ್ಜಿ, ಶರಣು ಕುಮಾರ ಹಾಗೂ ಕಾಳಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ</strong>: ‘ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸದ ಕಾರಣ ಅಪಘಾತಗಳು ಹೆಚ್ಚುತ್ತಿವೆ. ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು. ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಮಾನವೀಯತೆ ದೃಷ್ಟಿಯಿಂದ ಅಪಘಾತಕ್ಕೆ ಒಳಗಾದವರನ್ನು ರಕ್ಷಿಸಲು ಸಹಾಯ ಮಾಡಬೇಕು’ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ ಹೇಳಿದರು.</p>.<p>ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ 32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಅಪಘಾತಗಳು ಹೇಳಿ–ಕೇಳಿ ಬರುವುದಿಲ್ಲ. ಸಾರಿಗೆ ಇಲಾಖೆ ರೂಪಿಸಿರುವ ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಸೀಟ್ಬೆಲ್ಟ್, ಹೆಲ್ಮೆಟ್ ಧರಿಸಬೇಕು. ದ್ವಿಚಕ್ರ ವಾಹನದಲ್ಲಿ ಇಬ್ಬರಿಗಿಂತ ಹೆಚ್ಚು ಜನ ಪ್ರಯಾಣಿಸಬಾರದು. ಅನಾವಶ್ಯಕವಾಗಿ ಇತರ ವಾಹನಗಳನ್ನು ಹಿಂದಿಕ್ಕುವ ಪ್ರಯತ್ನ ಮಾಡಬೇಡಿ’ ಎಂದು ಸಲಹೆ ನೀಡಿದರು.</p>.<p>‘ಹೊಸ ಕಾಯ್ದೆಯಂತೆ ಮದ್ಯ ಸೇವಿಸಿ ವಾಹನ ಚಲಾಯಿಸಿದರೆ ₹10 ಸಾವಿರ ದಂಡ ವಿಧಿಸಲಾಗುತ್ತದೆ. ವಾಹನ ಚಲಾಯಿಸುವಾಗ ಮೊಬೈಲ್ ಬಳಸುವುದು ಅಪಾಯಕಾರಿ. ಏಕಾಗ್ರತೆ ಕಳೆದುಕೊಳ್ಳುವುದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚು. ಪರವಾನಗೆ ಹಾಗೂ ವಿಮೆ ಮಾಡಿಸುವುದು ಕಡ್ಡಾಯ’ ಎಂದರು.</p>.<p>ಕಾಲೇಜಿನ ಪ್ರಾಚಾರ್ಯ ಪ್ರೊ.ಚೆನ್ನಾರಡ್ಡಿ ತಂಗಡಗಿ, ತಹಶೀಲ್ದಾರ್ ಜಗನಾಥರೆಡ್ಡಿ, ಪಿಎಸ್ಐ ಚಂದ್ರಕಾಂತ ಮೆಕಾಲೆ, ಮೋಟಾರ್ ವಾಹನ ನಿರೀಕ್ಷಕ ವೆಂಕಟಪ್ಪ ಕಲಾಲ್, ಆನಂದ ಕುಮಾರ ಜೋಷಿ, ಡಾ.ಶರಣಪ್ಪ ಸಂಘರ್ಷ, ರಾಮಕೃಷ್ಣ ಮಿರ್ಜಿ, ಶರಣು ಕುಮಾರ ಹಾಗೂ ಕಾಳಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>