ಭೀಮರಾಯನಗುಡಿ (ಶಹಾಪುರ): ರೈತರು ಹೆಚ್ಚಿನ ಆದಾಯ ಪಡೆಯುವಲ್ಲಿ ಸಮಗ್ರ ಕೃಷಿಯಲ್ಲಿ ಎರೆಹುಳು ಬೇಸಾಯ, (ಕಪ್ಪ ಬಂಗಾರ) ಬಾರ್ಬರಿ ತಳಿಯ ಆಡು ಸಾಕಾಣಿಕೆ, ಮೀನು ಸಾಕಾಣಿಕೆ ಅಲ್ಲದೆ ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬನೆಯ ಜೀವನ ಮುನ್ನಡೆಸಬೇಕು ಎಂದು ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ದಯಾನಂದ ಸಾತಿಹಾಳ ತಿಳಿಸಿದರು.