<p>ಮೋಟ್ನಳಿ (ಯರಗೋಳ): ಗ್ರಾಮದ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಬೇಟೆಯಾಡುತ್ತಿದ್ದ ಒಬ್ಬ ಅಂತರರಾಜ್ಯ ಬೇಟೆಗಾರ ಮತ್ತು ಸ್ಥಳೀಯ ವಾಹನ ಚಾಲಕ ಸೇರಿ ಇಬ್ಬರನ್ನು ಬಂಧಿಸಲಾಗಿದೆ.</p>.<p>ಪ್ರಾದೇಶಿಕ ಅರಣ್ಯ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಳ ತಂಡವು ದಾಳಿ ಮಾಡಿ, ಮೃತ 6 ಕಾಡು ಹಂದಿ ಹಾಗೂ ಒಂದು ಜಿಪ್ ವಶಪಡಿಸಿಕೊಂಡಿದೆ.</p>.<p>ಮಹಾರಾಷ್ಟ್ರ ಜಲಗಾಂವ್ ಮೂಲದ ಬಂಟಿ ಶಂಕರ್ ಬಾಬು ಹಾಗೂ ಮೋಟ್ನಳ್ಳಿ ತಾಂಡಾದವಾಹನ ಚಾಲಕ ಕುಮಾರ ಬಂಧಿತ ಆರೋಪಿಗಳು. ಜತೆಯಲ್ಲಿದ್ದ ಇಬ್ಬರು ಪರಾರಿ ಆಗಿದ್ದಾರೆ.</p>.<p>ಈ ತಂಡ ಕಚ್ಚಾ ಬಾಂಬ್ ತಯಾರಿಸಿ ಅರಣ್ಯ ಪ್ರದೇಶದಲ್ಲಿ ನೀರು ಇರುವ ಸ್ಥಳದಲ್ಲಿ ಇರಿಸುತ್ತಿದ್ದರು. ನೀರು ಕುಡಿಯಲು ಬರುವ ಪ್ರಾಣಿಗಳ ಸ್ಪರ್ಶದಿಂದ ಬಾಂಬ್ ಸ್ಫೋಟಗೊಳ್ಳುತ್ತಿತ್ತು. ಇದರಿಂದ ಪ್ರಾಣಿಗಳು ಸಾವನ್ನಪ್ಪುತ್ತಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿಗಳ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿ ದ್ದಾರೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಸುನಿಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೋಟ್ನಳಿ (ಯರಗೋಳ): ಗ್ರಾಮದ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಬೇಟೆಯಾಡುತ್ತಿದ್ದ ಒಬ್ಬ ಅಂತರರಾಜ್ಯ ಬೇಟೆಗಾರ ಮತ್ತು ಸ್ಥಳೀಯ ವಾಹನ ಚಾಲಕ ಸೇರಿ ಇಬ್ಬರನ್ನು ಬಂಧಿಸಲಾಗಿದೆ.</p>.<p>ಪ್ರಾದೇಶಿಕ ಅರಣ್ಯ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಳ ತಂಡವು ದಾಳಿ ಮಾಡಿ, ಮೃತ 6 ಕಾಡು ಹಂದಿ ಹಾಗೂ ಒಂದು ಜಿಪ್ ವಶಪಡಿಸಿಕೊಂಡಿದೆ.</p>.<p>ಮಹಾರಾಷ್ಟ್ರ ಜಲಗಾಂವ್ ಮೂಲದ ಬಂಟಿ ಶಂಕರ್ ಬಾಬು ಹಾಗೂ ಮೋಟ್ನಳ್ಳಿ ತಾಂಡಾದವಾಹನ ಚಾಲಕ ಕುಮಾರ ಬಂಧಿತ ಆರೋಪಿಗಳು. ಜತೆಯಲ್ಲಿದ್ದ ಇಬ್ಬರು ಪರಾರಿ ಆಗಿದ್ದಾರೆ.</p>.<p>ಈ ತಂಡ ಕಚ್ಚಾ ಬಾಂಬ್ ತಯಾರಿಸಿ ಅರಣ್ಯ ಪ್ರದೇಶದಲ್ಲಿ ನೀರು ಇರುವ ಸ್ಥಳದಲ್ಲಿ ಇರಿಸುತ್ತಿದ್ದರು. ನೀರು ಕುಡಿಯಲು ಬರುವ ಪ್ರಾಣಿಗಳ ಸ್ಪರ್ಶದಿಂದ ಬಾಂಬ್ ಸ್ಫೋಟಗೊಳ್ಳುತ್ತಿತ್ತು. ಇದರಿಂದ ಪ್ರಾಣಿಗಳು ಸಾವನ್ನಪ್ಪುತ್ತಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿಗಳ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿ ದ್ದಾರೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಸುನಿಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>