<p><strong>ಗುರುಮಠಕಲ್</strong>: ಲಾರಿ ಹಾಯ್ದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಪಸಪೂಲ-ಗಣಾಪುರ ಗ್ರಾಮಗಳ ನಡುವಿನ ರಾಜ್ಯ ಹೆದ್ಧಾರಿ-16 ರಲ್ಲಿ ಶುಕ್ರವಾರ ನಡೆದಿದೆ.</p><p>ಮೃತರನ್ನು ತಾಲ್ಲೂಕಿನ ಶಿವಪುರ ಗ್ರಾಮದ ಗಂಗಪ್ಪ ಶರಣಪ್ಪ ಸುರನೋಳ(38) ಎಂದು ಗುರುತಿಸಲಾಗಿದೆ.<br> ತೆಲಂಗಾಣ ರಾಜ್ಯದ ಭೈರಂಕೊಂಡ ಗ್ರಾಮದಲ್ಲಿನ ಸಂಬಂಧಿಕರ ಮನೆಯಲ್ಲಿ ದೇವರ ಕಾರ್ಯವೊಂದಕ್ಕೆ ಅಲ್ಲಿಗೆ ಹೋಗಿ ಹಿಂತಿರುಗುವ ವೇಳೆ ಘಟನೆ ಸಂಭವಿಸಿದೆ.</p><p>ಯಾದಗಿರಿಯಿಂದ ಹೈದರಾಬಾದ್ ನಗರಕ್ಕೆ ತೆರಳುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಗಂಗಪ್ಪ ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಹಿಂಬದಿಯಿಂದ ಗುದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಘಟನೆ ಸಂಬಂಧ ಆಂಧ್ರಪ್ರದೇಶದ ಬೇತಂಚರ್ಲಾ ಮೂಲದ ಲಾರಿ ಚಾಲಕ ಹರಿನಾಥರೆಡ್ಡಿ ವಿರುದ್ಧ ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುರುಮಠಕಲ್</strong>: ಲಾರಿ ಹಾಯ್ದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಪಸಪೂಲ-ಗಣಾಪುರ ಗ್ರಾಮಗಳ ನಡುವಿನ ರಾಜ್ಯ ಹೆದ್ಧಾರಿ-16 ರಲ್ಲಿ ಶುಕ್ರವಾರ ನಡೆದಿದೆ.</p><p>ಮೃತರನ್ನು ತಾಲ್ಲೂಕಿನ ಶಿವಪುರ ಗ್ರಾಮದ ಗಂಗಪ್ಪ ಶರಣಪ್ಪ ಸುರನೋಳ(38) ಎಂದು ಗುರುತಿಸಲಾಗಿದೆ.<br> ತೆಲಂಗಾಣ ರಾಜ್ಯದ ಭೈರಂಕೊಂಡ ಗ್ರಾಮದಲ್ಲಿನ ಸಂಬಂಧಿಕರ ಮನೆಯಲ್ಲಿ ದೇವರ ಕಾರ್ಯವೊಂದಕ್ಕೆ ಅಲ್ಲಿಗೆ ಹೋಗಿ ಹಿಂತಿರುಗುವ ವೇಳೆ ಘಟನೆ ಸಂಭವಿಸಿದೆ.</p><p>ಯಾದಗಿರಿಯಿಂದ ಹೈದರಾಬಾದ್ ನಗರಕ್ಕೆ ತೆರಳುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಗಂಗಪ್ಪ ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಹಿಂಬದಿಯಿಂದ ಗುದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಘಟನೆ ಸಂಬಂಧ ಆಂಧ್ರಪ್ರದೇಶದ ಬೇತಂಚರ್ಲಾ ಮೂಲದ ಲಾರಿ ಚಾಲಕ ಹರಿನಾಥರೆಡ್ಡಿ ವಿರುದ್ಧ ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>