ಈ ಕುರಿತು 'ಪ್ರಜಾವಾಣಿ' ಜೊತೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ, 'ಕೇಂದ್ರ ಬಸ್ ನಿಲ್ದಾಣ ಬಳಿ ಬಟ್ಟೆ, ಹಣವಿರುವ ಬ್ಯಾಗ್ ಪತ್ತೆಯಾಗಿದೆ. ಇದರಿಂದ ಆತಂಕಪಡುವ ಅವಶ್ಯವಿಲ್ಲ. ಶಂಕಾಸ್ಪದ ವ್ಯಕ್ತಿ ಅಥವಾ ವಸ್ತು ಕಂಡು ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ' ಎಂದು ಮನವಿ ಮಾಡಿದರು.