ಬಳ್ಳಾರಿ: ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಶಾಸಕ ಎಸ್. ತಿಪ್ಪೇಸ್ವಾಮಿ ಅವರಿಗೇ ಟಿಕೆಟ್ ಘೋಷಿಸಬೇಕು ಎಂದು ಅವರ ಬೆಂಬಲಿಗರು ಆಗ್ರಹಿಸಿದ್ದಾರೆ.
ತಿಪ್ಪೇಸ್ವಾಮಿ ಅವರಿಗೇ ಟಿಕೆಟ್ ನೀಡುವಂತೆ ಆಗ್ರಹಿಸಿ ಅವರ ಸಾವಿರಾರು ಬೆಂಬಲಿಗರು ಬುಧವಾರ ಸಂಜೆ ಸಂಸದ ಬಿ. ಶ್ರೀರಾಮಲು ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ, ಪೊಲೀಸರು ಅವರನ್ನು ತಡೆದು ವಾಪಸ್ ಕಳುಹಿಸಿದ್ದಾರೆ.