<p><strong>ಸುರಪುರ</strong>: ‘ನಮ್ಮ ಪ್ರಾಚೀನ ಭಾರತ ಎಲ್ಲ ವಿಧದಲ್ಲಿ ಸ್ವಾವಲಂಬಿಯಾಗಿತ್ತು. ನಮ್ಮ ದೇಶದ ಸಂಸ್ಕಾರ, ಆದರ ಆತಿಥ್ಯ ವಿಶ್ವಕ್ಕೆ ಮಾದರಿಯಾಗಿತ್ತು. ಇಂದಿನ ವಿದ್ಯಾರ್ಥಿಗಳಲ್ಲಿ ಇದರ ಕಲ್ಪನೆ ಇರಲಿ’ ಎಂದು ಸಂಘ ಪರಿವಾರದ ಮುಖಂಡ ಉಪೇಂದ್ರನಾಯಕ ಸುಬೇದಾರ ಹೇಳಿದರು.</p>.<p>ನಗರದ ಕರ್ನಾಟಕ ಬಿ.ಇಡಿ. ಕಾಲೇಜಿನಲ್ಲಿ ರಾಷ್ಟ್ರೋತ್ಥಾನ ಪರಿಷತ್ನ ಪ್ರಶಿಕ್ಷಣ ಭಾರತಿ ಅಂಗಸಂಸ್ಥೆ ಏರ್ಪಡಿಸಿದ್ದ ರಾಷ್ಟ್ರ ಪುನರ್ ನಿರ್ಮಾಣದಲ್ಲಿ ಯುವಕರ ಮತ್ತು ಶಿಕ್ಷಕರ ಪಾತ್ರದ ಕುರಿತು ಅವರು ಮಾತನಾಡಿದರು.</p>.<p>‘ನಮ್ಮ ದೇಶವನ್ನು ವಿಶ್ವಗುರು ಮಾಡುವ ನಿಟ್ಟಿನಲ್ಲಿ ಪ್ರತಿ ಪ್ರಜೆ ಜವಾಬ್ದಾರಿ ತೆಗೆದುಕೊಳ್ಳಬೇಕು. ನಮ್ಮ ದೇಶವನ್ನು ನಶೆ, ಭ್ರಷ್ಟಾಚಾರ, ಶೈಕ್ಷಣಿಕ ವ್ಯಾಪಾರೀಕರಣದಿಂದ ಮುಕ್ತಗೊಳಿಸಬೇಕು. ಈ ಕುರಿತು ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ಉಪದೇಶಿಸಬೇಕು’ ಎಂದರು.</p>.<p>ಉಪನ್ಯಾಸಕ ರಾಘವೇಂದ್ರ ಭಂಡಿಮನಿ ಮಾತನಾಡಿ, ‘ಶಿಕ್ಷಕರು ದೇಶದ ಶಿಲ್ಪಿಗಳು. ಆದರ್ಶ ಮತ್ತು ಸಾಧನೆಯ ಮನೋಭಾವವುಳ್ಳ ವಿದ್ಯಾರ್ಥಿಗಳನ್ನು ತಯಾರು ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಪ್ರಶಿಕ್ಷಣ ಭಾರತಿ ತಾಲ್ಲೂಕು ಸಂಚಾಲಕ ಸಿದ್ದಯ್ಯ ಹಿರೇಮಠ ಮಾತನಾಡಿ, ‘ಪ್ರಶಿಕ್ಷಣ ಭಾರತಿ ರಾಷ್ಟ್ರೋತ್ಥಾನ ಪರಿಷತ್ ಆಯೋಜಿಸಿರುವ ಒಂದು ಪ್ರಮುಖ ಶಿಕ್ಷಕರ ತರಬೇತಿ ಕಾರ್ಯಕ್ರಮ. ಭಾರತೀಯ ಸಂಸ್ಕೃತಿ, ಪರಂಪರೆ, ಮತ್ತು ಜ್ಞಾನದ ಆಧಾರದ ಮೇಲೆ ಪರಿಣಾಮಕಾರಿ ಶಿಕ್ಷಕರನ್ನು ಅಭಿವೃದ್ಧಿ ಪಡಿಸುವ ಗುರಿ ಹೊಂದಿದೆ. ವಿಷಯ ಪಾಂಡಿತ್ಯ, ಭಾಷಾ ಪ್ರಾವೀಣ್ಯತೆ, ಮೌಲ್ಯ ಆಧಾರಿತ ಬೋಧನೆಯ ಮೂಲಕ ವಿದ್ಯಾರ್ಥಿಗಳಲ್ಲಿ ಕಲಿಕೆಯನ್ನು ಸುಗಮಗೊಳಿಸಲು ಶಿಕ್ಷಕರಿಗೆ ತರಬೇತಿ ನೀಡುತ್ತದೆ’ ಎಂದು ತಿಳಿಸಿದರು.</p>.<p>ಕಾಲೇಜಿನ ಪ್ರಾಂಶುಪಾಲರಾದ ರೇಣುಕಾ ಕನಕಗಿರಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ನಿಂಗಣ್ಣ, ಅಮರೇಶ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ‘ನಮ್ಮ ಪ್ರಾಚೀನ ಭಾರತ ಎಲ್ಲ ವಿಧದಲ್ಲಿ ಸ್ವಾವಲಂಬಿಯಾಗಿತ್ತು. ನಮ್ಮ ದೇಶದ ಸಂಸ್ಕಾರ, ಆದರ ಆತಿಥ್ಯ ವಿಶ್ವಕ್ಕೆ ಮಾದರಿಯಾಗಿತ್ತು. ಇಂದಿನ ವಿದ್ಯಾರ್ಥಿಗಳಲ್ಲಿ ಇದರ ಕಲ್ಪನೆ ಇರಲಿ’ ಎಂದು ಸಂಘ ಪರಿವಾರದ ಮುಖಂಡ ಉಪೇಂದ್ರನಾಯಕ ಸುಬೇದಾರ ಹೇಳಿದರು.</p>.<p>ನಗರದ ಕರ್ನಾಟಕ ಬಿ.ಇಡಿ. ಕಾಲೇಜಿನಲ್ಲಿ ರಾಷ್ಟ್ರೋತ್ಥಾನ ಪರಿಷತ್ನ ಪ್ರಶಿಕ್ಷಣ ಭಾರತಿ ಅಂಗಸಂಸ್ಥೆ ಏರ್ಪಡಿಸಿದ್ದ ರಾಷ್ಟ್ರ ಪುನರ್ ನಿರ್ಮಾಣದಲ್ಲಿ ಯುವಕರ ಮತ್ತು ಶಿಕ್ಷಕರ ಪಾತ್ರದ ಕುರಿತು ಅವರು ಮಾತನಾಡಿದರು.</p>.<p>‘ನಮ್ಮ ದೇಶವನ್ನು ವಿಶ್ವಗುರು ಮಾಡುವ ನಿಟ್ಟಿನಲ್ಲಿ ಪ್ರತಿ ಪ್ರಜೆ ಜವಾಬ್ದಾರಿ ತೆಗೆದುಕೊಳ್ಳಬೇಕು. ನಮ್ಮ ದೇಶವನ್ನು ನಶೆ, ಭ್ರಷ್ಟಾಚಾರ, ಶೈಕ್ಷಣಿಕ ವ್ಯಾಪಾರೀಕರಣದಿಂದ ಮುಕ್ತಗೊಳಿಸಬೇಕು. ಈ ಕುರಿತು ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ಉಪದೇಶಿಸಬೇಕು’ ಎಂದರು.</p>.<p>ಉಪನ್ಯಾಸಕ ರಾಘವೇಂದ್ರ ಭಂಡಿಮನಿ ಮಾತನಾಡಿ, ‘ಶಿಕ್ಷಕರು ದೇಶದ ಶಿಲ್ಪಿಗಳು. ಆದರ್ಶ ಮತ್ತು ಸಾಧನೆಯ ಮನೋಭಾವವುಳ್ಳ ವಿದ್ಯಾರ್ಥಿಗಳನ್ನು ತಯಾರು ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಪ್ರಶಿಕ್ಷಣ ಭಾರತಿ ತಾಲ್ಲೂಕು ಸಂಚಾಲಕ ಸಿದ್ದಯ್ಯ ಹಿರೇಮಠ ಮಾತನಾಡಿ, ‘ಪ್ರಶಿಕ್ಷಣ ಭಾರತಿ ರಾಷ್ಟ್ರೋತ್ಥಾನ ಪರಿಷತ್ ಆಯೋಜಿಸಿರುವ ಒಂದು ಪ್ರಮುಖ ಶಿಕ್ಷಕರ ತರಬೇತಿ ಕಾರ್ಯಕ್ರಮ. ಭಾರತೀಯ ಸಂಸ್ಕೃತಿ, ಪರಂಪರೆ, ಮತ್ತು ಜ್ಞಾನದ ಆಧಾರದ ಮೇಲೆ ಪರಿಣಾಮಕಾರಿ ಶಿಕ್ಷಕರನ್ನು ಅಭಿವೃದ್ಧಿ ಪಡಿಸುವ ಗುರಿ ಹೊಂದಿದೆ. ವಿಷಯ ಪಾಂಡಿತ್ಯ, ಭಾಷಾ ಪ್ರಾವೀಣ್ಯತೆ, ಮೌಲ್ಯ ಆಧಾರಿತ ಬೋಧನೆಯ ಮೂಲಕ ವಿದ್ಯಾರ್ಥಿಗಳಲ್ಲಿ ಕಲಿಕೆಯನ್ನು ಸುಗಮಗೊಳಿಸಲು ಶಿಕ್ಷಕರಿಗೆ ತರಬೇತಿ ನೀಡುತ್ತದೆ’ ಎಂದು ತಿಳಿಸಿದರು.</p>.<p>ಕಾಲೇಜಿನ ಪ್ರಾಂಶುಪಾಲರಾದ ರೇಣುಕಾ ಕನಕಗಿರಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ನಿಂಗಣ್ಣ, ಅಮರೇಶ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>