ಪಟ್ಟಣದ ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯಲ್ಲಿ 20 ಸಾವಿರ ಹೆಕ್ಟೇರ್ ಭೂ ಪ್ರದೇಶದಲ್ಲಿ ಬಿತ್ತನೆಯ ಗುರಿ ಹೊಂದಲಾಗಿದೆ. ಈ ಬಾರಿ ಮುಂಗಾರು ಮಳೆಯು ವಾಡಿಕೆಯಷ್ಟು ಸುರಿಯಲಿದೆ ಹಾಗೂ 4 ದಿನಗಳು ಮೊದಲೇ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆಯೂ ಮುನ್ಸೂಚನೆ ನೀಡಿದೆ. ಅದರಂತೆ ಬಿತ್ತನೆ ಬೀಜ ಖರೀದಿಸುವಾಗ ರೈತರು ತಪ್ಪದೇ ಅಧಿಕೃತ ರಸೀದಿ ಪಡೆಯಬೇಕು. ರಸೀದಿಯಲ್ಲಿ ಲಾಟ್ ನಂಬರ್, ಚೀಲದ ಮೇಲೆ ಉತ್ಪಾದಕರು ಹಾಗೂ ಮಾರಾಟಗಾರರ ವಿಳಾಸವನ್ನು ಸಂಬಂಧಪಟ್ಟ ಪ್ರಾಧಿಕಾರದಿಂದ ದೃಢಿಕರಿಸಲಾಗಿದಿಯೇ? ಬೀಜ ಮೊಳಕೆ ಪ್ರಮಾಣ ಮತ್ತು ಬೀಜವನ್ನು ಕೀಟನಾಶಕಗಳಿಂದ ಉಪಚಾರ ಮಾಡಲಾಗಿದಿಯೇ, ಬೀಜ ಉತ್ಪಾದನಾ ದಿನಾಂಕ ಮತ್ತು ಬಾಳಿಕೆ ಅವಧಿಯನ್ನು ನಮೂದಿಸಲಾಗಿದೆಯೇ ಎಂಬುದನ್ನು ಗಮನಿಸಬೇಕು.