<p>ಸೈದಾಪುರ: ಪ್ರತಿಯೊಬ್ಬರೂ ಸ್ವಯಂ ಪ್ರೇರಣೆಯಿಂದ ಲಸಿಕೆ ಪಡೆಯುವ ಮೂಲಕ ಓಮೈಕ್ರಾನ್ ಹರಡುವುದನ್ನು ತಡೆಯಲು ಸಹಕರಿಸಬೇಕು ಎಂದು ಪ್ರಜ್ಞಾ ಕೈಗಾರಿಕಾ ತರಬೇತಿ ಕೇಂದ್ರದ ಅಧ್ಯಕ್ಷ ಮಲ್ಲಿಕಾರ್ಜುನ ಅಲ್ಲಿಪುರ ತಿಳಿಸಿದರು.</p>.<p>ಪಟ್ಟಣದ ಪ್ರಜ್ಞಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸೋಂಕಿನಿಂದ ನಮ್ಮನ್ನು ರಕ್ಷಿಸಿಕೊಳ್ಳುವುದರ ಜತೆಗೆ ನಮ್ಮವರನ್ನು ಕಾಪಾಡಿಕೊಳ್ಳಬೇಕು. ಆದ್ದರಿಂದ ಕಡ್ಡಾಯವಾಗಿ ಎಲ್ಲರೂ ಲಸಿಕೆ ಪಡೆಯಬೇಕು. ಕೋವ್ಯಾಕ್ಸಿನ್ ಹಾಗೂ ಕೋವಿಶಿಲ್ಡ್ ಪರಿಣಾಮಕಾರಿ ಎಂದು ಮನ್ನಣೆ ಗಳಿಸಿದೆ. ಚುಚ್ಚುಮದ್ದು ಹಾಕಿಸಿಕೊಳ್ಳುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುವುದರಿಂದ ಸೋಂಕಿನ ವಿರುದ್ಧ ಹೋರಾಡಲು ಮತ್ತಷ್ಟು ಶಕ್ತಿ ಹೆಚ್ಚುತ್ತದೆ ಎಂದರು.</p>.<p>ಸರ್ಕಾರ ದೇಶದ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಲಸಿಕಾ ಅಭಿಯಾನ ಕೈಗೊಂಡು ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದೆ. ಇದಕ್ಕೆ ಪೂರಕವಾಗಿ ಆರೋಗ್ಯ ಇಲಾಖೆ ಕೈ ಜೋಡಿಸಿ ವಿದ್ಯಾರ್ಥಿಗಳ ಶಾಲಾ-ಕಾಲೇಜುಗಳಿಗೆ ಹೋಗಿ ಲಸಿಕೆಯನ್ನು ನೀಡುತ್ತಿರುವುದು ಶ್ಲಾಘನೀಯವಾದ ಕಾರ್ಯವಾಗಿದೆ. ಇದರ ಸದುಪಯೋಗ ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.</p>.<p>ಕಿರಿಯ ತರಬೇತಿ ಅಧಿಕಾರಿಗಳಾದ ಭೀಮಣ್ಣ ಮಡಿವಾಳಕರ್, ಶಂಕರ್ ರೆಡ್ಡಿ ಗೌಡ ಬಿಳ್ಹಾರ, ಮಹಾದೇವಪ್ಪ ದದ್ದಲ್, ಆರೋಗ್ಯ ಇಲಾಖೆಯ ಸಿಬ್ಬಂದಿ ಮಂಜುನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೈದಾಪುರ: ಪ್ರತಿಯೊಬ್ಬರೂ ಸ್ವಯಂ ಪ್ರೇರಣೆಯಿಂದ ಲಸಿಕೆ ಪಡೆಯುವ ಮೂಲಕ ಓಮೈಕ್ರಾನ್ ಹರಡುವುದನ್ನು ತಡೆಯಲು ಸಹಕರಿಸಬೇಕು ಎಂದು ಪ್ರಜ್ಞಾ ಕೈಗಾರಿಕಾ ತರಬೇತಿ ಕೇಂದ್ರದ ಅಧ್ಯಕ್ಷ ಮಲ್ಲಿಕಾರ್ಜುನ ಅಲ್ಲಿಪುರ ತಿಳಿಸಿದರು.</p>.<p>ಪಟ್ಟಣದ ಪ್ರಜ್ಞಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸೋಂಕಿನಿಂದ ನಮ್ಮನ್ನು ರಕ್ಷಿಸಿಕೊಳ್ಳುವುದರ ಜತೆಗೆ ನಮ್ಮವರನ್ನು ಕಾಪಾಡಿಕೊಳ್ಳಬೇಕು. ಆದ್ದರಿಂದ ಕಡ್ಡಾಯವಾಗಿ ಎಲ್ಲರೂ ಲಸಿಕೆ ಪಡೆಯಬೇಕು. ಕೋವ್ಯಾಕ್ಸಿನ್ ಹಾಗೂ ಕೋವಿಶಿಲ್ಡ್ ಪರಿಣಾಮಕಾರಿ ಎಂದು ಮನ್ನಣೆ ಗಳಿಸಿದೆ. ಚುಚ್ಚುಮದ್ದು ಹಾಕಿಸಿಕೊಳ್ಳುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುವುದರಿಂದ ಸೋಂಕಿನ ವಿರುದ್ಧ ಹೋರಾಡಲು ಮತ್ತಷ್ಟು ಶಕ್ತಿ ಹೆಚ್ಚುತ್ತದೆ ಎಂದರು.</p>.<p>ಸರ್ಕಾರ ದೇಶದ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಲಸಿಕಾ ಅಭಿಯಾನ ಕೈಗೊಂಡು ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದೆ. ಇದಕ್ಕೆ ಪೂರಕವಾಗಿ ಆರೋಗ್ಯ ಇಲಾಖೆ ಕೈ ಜೋಡಿಸಿ ವಿದ್ಯಾರ್ಥಿಗಳ ಶಾಲಾ-ಕಾಲೇಜುಗಳಿಗೆ ಹೋಗಿ ಲಸಿಕೆಯನ್ನು ನೀಡುತ್ತಿರುವುದು ಶ್ಲಾಘನೀಯವಾದ ಕಾರ್ಯವಾಗಿದೆ. ಇದರ ಸದುಪಯೋಗ ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.</p>.<p>ಕಿರಿಯ ತರಬೇತಿ ಅಧಿಕಾರಿಗಳಾದ ಭೀಮಣ್ಣ ಮಡಿವಾಳಕರ್, ಶಂಕರ್ ರೆಡ್ಡಿ ಗೌಡ ಬಿಳ್ಹಾರ, ಮಹಾದೇವಪ್ಪ ದದ್ದಲ್, ಆರೋಗ್ಯ ಇಲಾಖೆಯ ಸಿಬ್ಬಂದಿ ಮಂಜುನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>