<p><strong>ಯಾದಗಿರಿ</strong>: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್ಈಕೆಆರ್ಟಿಸಿ) ಅಧಿಕಾರಿಗಳು ಬಸ್ ಟಿಕೆಟ್ ಮೇಲೆ ಕೋವಿಡ್ ಲಸಿಕೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.</p>.<p>‘ಕೋವಿಡ್ ನಿಯಂತ್ರಿಸಲು ಲಸಿಕೆ ಹಾಕಿಸಿಕೊಳ್ಳಿ. ಮಾಸ್ಕ್ ಧರಿಸಿ ಪ್ರಯಾಣಿಸಿ’ ಎನ್ನುವ ಬರಹ ಪ್ರಯಾಣಿಕರ ಚೀಟಿ ಮೇಲೆ ಮುದ್ರಿಸಿದ್ದಾರೆ. ನಗರ ಸಾರಿಗೆ, ಗ್ರಾಮಾಂತರ, ರಾಜಧಾನಿ ಬಸ್ ಪ್ರಯಾಣಿಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ.</p>.<p>ಜಿಲ್ಲೆಯ ನಾಲ್ಕು ಡಿಪೋಗಳ ಬಸ್ಗಳಲ್ಲಿ ಶನಿವಾರದಿಂದ ಟಿಕೆಟ್ ಮೇಲೆ ಮುದ್ರಿಸಲಾಗುತ್ತಿದೆ. ಈಗಾಗಲೇ ಬಸ್ ನಿಲ್ದಾಣ, ಬಸ್ಗಳಲ್ಲಿ ಜಾಗೃತಿ ಫಲಕಗಳನ್ನು ಹಾಕಲಾಗಿದೆ. ವಿಶೇಷವಾಗಿ ಪ್ರಯಾಣಿಕರ ಟಿಕೆಟ್ ಮೇಲೆ ಮುದ್ರಿಸುವುದರಿಂದ ಲಸಿಕೆ ಬಗ್ಗೆ ಮತ್ತಷ್ಟು ಜಾಗೃತಿ ಮೂಡಿಸಿದಂತೆ ಆಗುತ್ತದೆ ಎನ್ನುವುದು ಸಾರಿಗೆ ಇಲಾಖೆ ಅಧಿಕಾರಿಗಳ ಮಾತಾಗಿದೆ.</p>.<p>ಗ್ರಾಮೀಣ ಜನರುಲಸಿಕೆ ಬಗ್ಗೆ ಹೊಂದಿರುವ ಮೂಢನಂಬಿಕೆಯಿಂದ ಚುಚ್ಚುಮದ್ದು ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಲು ಪ್ರಯಾಣಿಕರಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್ಈಕೆಆರ್ಟಿಸಿ) ಅಧಿಕಾರಿಗಳು ಬಸ್ ಟಿಕೆಟ್ ಮೇಲೆ ಕೋವಿಡ್ ಲಸಿಕೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.</p>.<p>‘ಕೋವಿಡ್ ನಿಯಂತ್ರಿಸಲು ಲಸಿಕೆ ಹಾಕಿಸಿಕೊಳ್ಳಿ. ಮಾಸ್ಕ್ ಧರಿಸಿ ಪ್ರಯಾಣಿಸಿ’ ಎನ್ನುವ ಬರಹ ಪ್ರಯಾಣಿಕರ ಚೀಟಿ ಮೇಲೆ ಮುದ್ರಿಸಿದ್ದಾರೆ. ನಗರ ಸಾರಿಗೆ, ಗ್ರಾಮಾಂತರ, ರಾಜಧಾನಿ ಬಸ್ ಪ್ರಯಾಣಿಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ.</p>.<p>ಜಿಲ್ಲೆಯ ನಾಲ್ಕು ಡಿಪೋಗಳ ಬಸ್ಗಳಲ್ಲಿ ಶನಿವಾರದಿಂದ ಟಿಕೆಟ್ ಮೇಲೆ ಮುದ್ರಿಸಲಾಗುತ್ತಿದೆ. ಈಗಾಗಲೇ ಬಸ್ ನಿಲ್ದಾಣ, ಬಸ್ಗಳಲ್ಲಿ ಜಾಗೃತಿ ಫಲಕಗಳನ್ನು ಹಾಕಲಾಗಿದೆ. ವಿಶೇಷವಾಗಿ ಪ್ರಯಾಣಿಕರ ಟಿಕೆಟ್ ಮೇಲೆ ಮುದ್ರಿಸುವುದರಿಂದ ಲಸಿಕೆ ಬಗ್ಗೆ ಮತ್ತಷ್ಟು ಜಾಗೃತಿ ಮೂಡಿಸಿದಂತೆ ಆಗುತ್ತದೆ ಎನ್ನುವುದು ಸಾರಿಗೆ ಇಲಾಖೆ ಅಧಿಕಾರಿಗಳ ಮಾತಾಗಿದೆ.</p>.<p>ಗ್ರಾಮೀಣ ಜನರುಲಸಿಕೆ ಬಗ್ಗೆ ಹೊಂದಿರುವ ಮೂಢನಂಬಿಕೆಯಿಂದ ಚುಚ್ಚುಮದ್ದು ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಲು ಪ್ರಯಾಣಿಕರಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>