ಬಸ್ ಟಿಕೆಟ್ ಮೇಲೆ ಲಸಿಕೆ ಜಾಗೃತಿ

ಯಾದಗಿರಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್ಈಕೆಆರ್ಟಿಸಿ) ಅಧಿಕಾರಿಗಳು ಬಸ್ ಟಿಕೆಟ್ ಮೇಲೆ ಕೋವಿಡ್ ಲಸಿಕೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
‘ಕೋವಿಡ್ ನಿಯಂತ್ರಿಸಲು ಲಸಿಕೆ ಹಾಕಿಸಿಕೊಳ್ಳಿ. ಮಾಸ್ಕ್ ಧರಿಸಿ ಪ್ರಯಾಣಿಸಿ’ ಎನ್ನುವ ಬರಹ ಪ್ರಯಾಣಿಕರ ಚೀಟಿ ಮೇಲೆ ಮುದ್ರಿಸಿದ್ದಾರೆ. ನಗರ ಸಾರಿಗೆ, ಗ್ರಾಮಾಂತರ, ರಾಜಧಾನಿ ಬಸ್ ಪ್ರಯಾಣಿಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ.
ಜಿಲ್ಲೆಯ ನಾಲ್ಕು ಡಿಪೋಗಳ ಬಸ್ಗಳಲ್ಲಿ ಶನಿವಾರದಿಂದ ಟಿಕೆಟ್ ಮೇಲೆ ಮುದ್ರಿಸಲಾಗುತ್ತಿದೆ. ಈಗಾಗಲೇ ಬಸ್ ನಿಲ್ದಾಣ, ಬಸ್ಗಳಲ್ಲಿ ಜಾಗೃತಿ ಫಲಕಗಳನ್ನು ಹಾಕಲಾಗಿದೆ. ವಿಶೇಷವಾಗಿ ಪ್ರಯಾಣಿಕರ ಟಿಕೆಟ್ ಮೇಲೆ ಮುದ್ರಿಸುವುದರಿಂದ ಲಸಿಕೆ ಬಗ್ಗೆ ಮತ್ತಷ್ಟು ಜಾಗೃತಿ ಮೂಡಿಸಿದಂತೆ ಆಗುತ್ತದೆ ಎನ್ನುವುದು ಸಾರಿಗೆ ಇಲಾಖೆ ಅಧಿಕಾರಿಗಳ ಮಾತಾಗಿದೆ.
ಗ್ರಾಮೀಣ ಜನರು ಲಸಿಕೆ ಬಗ್ಗೆ ಹೊಂದಿರುವ ಮೂಢನಂಬಿಕೆಯಿಂದ ಚುಚ್ಚುಮದ್ದು ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಲು ಪ್ರಯಾಣಿಕರಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.