ಯಾದಗಿರಿ: ಜಾನುವಾರುಗಳಿಗೆ ಕಾಲು- ಬಾಯಿ ರೋಗ ಬಂದಾಗ ಚಿಕಿತ್ಸೆಗೆ ಬದಲಾಗಿ ಲಸಿಕೆಯೇ ಮುಖ್ಯವಾಗಿದೆ ಎಂಬುದನ್ನು ರೈತರು ಅರಿಯಬೇಕು. ಪಶು ವೈದ್ಯರು ಮನೆಮನೆಗೆ ಲಸಿಕಾಕರಣಕ್ಕೆ ಬಂದಾಗ ರೈತರು ತಮ್ಮ ಜಾನುವಾರುಗಳಿಗೆ ಮರೆಯದೇ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅಭಿಪ್ರಾಯಪಟ್ಟರು.
ನಗರದ ಜಿಲ್ಲಾ ಪಾಲಿಕ್ಲಿನಿಕ್ ಆಸ್ಪತ್ರೆಯಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ 3ನೇ ಸುತ್ತಿನ ಕಾಲು-ಬಾಯಿ ರೋಗ ನಿಯಂತ್ರಣ ಲಸಿಕಾ ಅಭಿಯಾನಕ್ಕೆ ಗುರುವಾರ ಗೋಪೂಜೆ ನೆರವೇರಿಸಿ, ಹಸಿರು ನಿಶಾನೆ ತೋರಿ ಮಾತನಾಡಿದರು.
ರೈತರು ಕಾಲುಬಾಯಿ ರೋಗ ಲಸಿಕೆ ಹಾಕಿಸಿ ರೋಗ ಬಾರದಂತೆ ಜಾನುವಾರು ಗಳನ್ನು ರಕ್ಷಿಸಬೇಕು. ಜಿಲ್ಲೆಯನ್ನು ಕಾಲು ಬಾಯಿ ರೋಗ ಮುಕ್ತ ಮಾಡಲು ಸಹಕರಿಸಬೇಕು ಎಂದರು.
ಜಿಲ್ಲೆಯಾದ್ಯಂತ ಜನವರಿ 5ರಿಂದ ಜನವರಿ 31ರ ವರೆಗೆ ಎಲ್ಲಾ ಹಸು, ಎಮ್ಮೆ, ಎತ್ತು, ಕರುಗಳಿಗೆ ಲಸಿಕೆ ನೀಡ ಲಾಗುತ್ತದೆ. ಈ ಲಸಿಕಾಕರಣ ಶೇಕಡಾ ನೂರರಷ್ಟು ಗುರಿ ಸಾಧಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸಂಬಂಧಿಸಿದ ಅಧಿ ಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಈ ಸಂದರ್ಭದಲ್ಲಿ ಯಾದಗಿರಿ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿ ಡಾ.ಶರಣಭೂಪಾಲರೆಡ್ಡಿ, ತಾಲ್ಲೂಕಿನ ಪಶುವೈದ್ಯಾಧಿಕಾರಿಗಳು, ಇಲಾಖೆಯ ತಂಡಗಳ ಸಿಬ್ಬಂದಿ ಇದ್ದರು.