<p><strong>ವಡಗೇರಾ</strong>: ಪಟ್ಟಣದಲ್ಲಿ ನ್ಯಾಯಾಲಯ ಸ್ಥಾಪಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ತಾಲ್ಲೂಕು ಘಟಕದ ಅಧ್ಯಕ್ಷ ಬೀಮಣ್ಣ ಬೂದಿನಾಳ ನೇತೃತ್ವದಲ್ಲಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.</p>.<p>‘ವಡಗೇರಾ ತಾಲ್ಲೂಕು ಸುಮಾರು 2 ಲಕ್ಷ ಜನಸಂಖ್ಯೆ ಹೊಂದಿದೆ. ಸಾರ್ವಜನಿಕರಿಗೆ ಸಾರಿಗೆ ಸಂಪರ್ಕದ ಅನುಕೂಲವಿದೆ. ಇಲ್ಲಿ ಕೋರ್ಟ್ ಸ್ಥಾಪನೆಗೆ ಬೇಕಾದ ಸ್ಥಳವಕಾಶವೂ ಇದೆ. ಇಷ್ಟೆಲ್ಲ ಸೌಕರ್ಯವಿದ್ದರೂ ಸಹ ತಾಲ್ಲೂಕು ಕೋರ್ಟ್ ಇಲ್ಲ’ ಎಂದು ಮನವಿಪತ್ರದಲ್ಲಿ ತಿಳಿಸಿದ್ದಾರೆ.</p>.<p>‘ತಾಲ್ಲೂಕಿನ ಕೊನೆ ಭಾಗದ ಜನರು ತಮ್ಮ ವಾಜ್ಯಗಳಿಗೆ ದೂರದ ಶಹಾಪೂರ, ಯಾದಗಿರಿ ಕೋರ್ಟ್ಗಳಿಗೆ ಹೋಗುವುದು ಅನಿವಾರ್ಯವಾಗಿದೆ. ಸಾರ್ವಜನಿಕರ, ರೈತರ ಸಮಯದ ಜೊತೆಗೆ ಹಣವು ಪೋಲಾಗುತ್ತಿದೆ. ಈ ಕುರಿತು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರು ಯಾವ ಪ್ರಯೋಜನವಾಗಿಲ್ಲ’ ಎಂದು ದೂರಿದ್ದಾರೆ.</p>.<p>‘ವಡಗೇರಾ ಪಟ್ಟಣದಲ್ಲಿ ಕೋರ್ಟ್ ಸ್ಥಾಪಿಸಿ ಬಡವರಿಗೆ, ಸಾರ್ವಜನಿಕರಿಗೆ ಹಾಗೂ ರೈತರಿಗೆ ಅನುಕೂಲ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>ಈ ಸಂದರ್ಭದಲ್ಲಿ ಮಲ್ಲು ಹಲಗಿ ಕುರಕುಂದಾ, ಶಿವರಾಜ ಕೊಂಕಲ್, ಬಸವರಾಜ, ಪುಟ್ಟಯ್ಯ ಹಾಗೂ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ</strong>: ಪಟ್ಟಣದಲ್ಲಿ ನ್ಯಾಯಾಲಯ ಸ್ಥಾಪಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ತಾಲ್ಲೂಕು ಘಟಕದ ಅಧ್ಯಕ್ಷ ಬೀಮಣ್ಣ ಬೂದಿನಾಳ ನೇತೃತ್ವದಲ್ಲಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.</p>.<p>‘ವಡಗೇರಾ ತಾಲ್ಲೂಕು ಸುಮಾರು 2 ಲಕ್ಷ ಜನಸಂಖ್ಯೆ ಹೊಂದಿದೆ. ಸಾರ್ವಜನಿಕರಿಗೆ ಸಾರಿಗೆ ಸಂಪರ್ಕದ ಅನುಕೂಲವಿದೆ. ಇಲ್ಲಿ ಕೋರ್ಟ್ ಸ್ಥಾಪನೆಗೆ ಬೇಕಾದ ಸ್ಥಳವಕಾಶವೂ ಇದೆ. ಇಷ್ಟೆಲ್ಲ ಸೌಕರ್ಯವಿದ್ದರೂ ಸಹ ತಾಲ್ಲೂಕು ಕೋರ್ಟ್ ಇಲ್ಲ’ ಎಂದು ಮನವಿಪತ್ರದಲ್ಲಿ ತಿಳಿಸಿದ್ದಾರೆ.</p>.<p>‘ತಾಲ್ಲೂಕಿನ ಕೊನೆ ಭಾಗದ ಜನರು ತಮ್ಮ ವಾಜ್ಯಗಳಿಗೆ ದೂರದ ಶಹಾಪೂರ, ಯಾದಗಿರಿ ಕೋರ್ಟ್ಗಳಿಗೆ ಹೋಗುವುದು ಅನಿವಾರ್ಯವಾಗಿದೆ. ಸಾರ್ವಜನಿಕರ, ರೈತರ ಸಮಯದ ಜೊತೆಗೆ ಹಣವು ಪೋಲಾಗುತ್ತಿದೆ. ಈ ಕುರಿತು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರು ಯಾವ ಪ್ರಯೋಜನವಾಗಿಲ್ಲ’ ಎಂದು ದೂರಿದ್ದಾರೆ.</p>.<p>‘ವಡಗೇರಾ ಪಟ್ಟಣದಲ್ಲಿ ಕೋರ್ಟ್ ಸ್ಥಾಪಿಸಿ ಬಡವರಿಗೆ, ಸಾರ್ವಜನಿಕರಿಗೆ ಹಾಗೂ ರೈತರಿಗೆ ಅನುಕೂಲ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>ಈ ಸಂದರ್ಭದಲ್ಲಿ ಮಲ್ಲು ಹಲಗಿ ಕುರಕುಂದಾ, ಶಿವರಾಜ ಕೊಂಕಲ್, ಬಸವರಾಜ, ಪುಟ್ಟಯ್ಯ ಹಾಗೂ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>