<p><strong>ವಡಗೇರಾ</strong>: ‘ಇದೇ ಮೇ 31ರಂದು ವಡಗೇರಾ ಪಟ್ಟಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ’ ಎಂದು ಡಿಡಿಯು ಸಮೂಹ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಶಶಾಂಕ.ಬಿ.ಮೇಟಿ ತಿಳಿಸಿದರು.</p>.<p>ಪಟ್ಟಣದ ಡಿಡಿಯ ಸಂಸ್ಥೆಯ ಕಾರ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ಪಟ್ಟಣದ ಡಿಡಿಯು ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಮೇ 31ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಈ ಶಿಬಿರ ನಡೆಯಲಿದೆ. ಹೀಗಾಗಿ ಎಲ್ಲರು ಇದರ ಸದುಪಯೋಗ ಪಡೆದುಕೊಳ್ಳುಬೇಕು. ಕಣ್ಣಿನ ತಪಾಸಣೆ, ಹೃದಯ ರೋಗ, ಎಲುಬು ಕೀಲುಗಳ ತಪಾಸಣೆ, ಸಕ್ಕರೆ ರೋಗ, ಕ್ಯಾನ್ಸರ್ ತಪಾಸಣೆ ಮೂತ್ರಪಿಂಡಗಳ ತಪಾಸಣೆ ಹಾಗೂ ಇನ್ನಿತರ ರೋಗಗಳಿಗೆ ಚಿಕಿತ್ಸೆ ಕೊಡಿಸಲಾಗುವುದು’ ಎಂದರು.</p>.<p>‘ಶಿಬಿರದಲ್ಲಿ ಭಾಗವಹಿಸುವವರು ತಮ್ಮ ಎರಡು ಪಾಸ್ಪೋರ್ಟ್ ಸೈಜಿನ ಭಾವಚಿತ್ರ ಆಧಾರ ಕಾರ್ಡ್, ಪಡಿತರ ಚೀಟಿ ತರಬೇಕು’ ಎಂದು ಮಾಹಿತಿಯನ್ನು ನೀಡಿದರು.</p>.<p>‘ಈ ಶಿಬಿರವನ್ನು ಡಿಡಿಯು ಸಮೂಹ ಶಿಕ್ಷಣ ಸಂಸ್ಥೆ ವಡಗೇರಾ, ಸಪ್ತಗಿರಿ ಆಸ್ಪತ್ರೆ ಬೆಂಗಳೂರು, ಸ್ವರಾಧ್ಯ ಎಲುಬು ಮತ್ತು ಕೀಲು ಆಸ್ಪತ್ರೆ ಬೆಂಗಳೂರು, ಶಂಕರ್ ಕಣ್ಣಿನ ಆಸ್ಪತ್ರೆ ಬೆಂಗಳೂರು , ಭೀಮಣ್ಣ ಮೇಟಿ ಫೌಂಡೇಶನ್, ವಿ. ಎಂ .ಎಂ ಟ್ರಸ್ಟ್ ಜಿಲ್ಲಾ ಅಂಧತ್ವ ನಿವಾರಣ ಸಂಸ್ಥೆ ಯಾದಗಿರಿ ವೈದ್ಯಧಿಕಾರಿಗಳು ಹಾಗೂ ನೇತ್ರಾಧಿಕಾರಿಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>ಕಾಲೇಜಿನ ಪ್ರಾಂಶುಪಾಲ ಹೊನ್ನಯ್ಯ ಕೊಂಕಲ್, ಮುಖ್ಯಶಿಕ್ಷಕ ಜಸ್ಟಿನ್ ಕೆ. ಎಸ್, ಖಂಡಪ್ಪ ವರಿಕೇರಿ, ಯೋಗೇಶ ರೆಡ್ಡಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-30-1623956672</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ</strong>: ‘ಇದೇ ಮೇ 31ರಂದು ವಡಗೇರಾ ಪಟ್ಟಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ’ ಎಂದು ಡಿಡಿಯು ಸಮೂಹ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಶಶಾಂಕ.ಬಿ.ಮೇಟಿ ತಿಳಿಸಿದರು.</p>.<p>ಪಟ್ಟಣದ ಡಿಡಿಯ ಸಂಸ್ಥೆಯ ಕಾರ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ಪಟ್ಟಣದ ಡಿಡಿಯು ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಮೇ 31ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಈ ಶಿಬಿರ ನಡೆಯಲಿದೆ. ಹೀಗಾಗಿ ಎಲ್ಲರು ಇದರ ಸದುಪಯೋಗ ಪಡೆದುಕೊಳ್ಳುಬೇಕು. ಕಣ್ಣಿನ ತಪಾಸಣೆ, ಹೃದಯ ರೋಗ, ಎಲುಬು ಕೀಲುಗಳ ತಪಾಸಣೆ, ಸಕ್ಕರೆ ರೋಗ, ಕ್ಯಾನ್ಸರ್ ತಪಾಸಣೆ ಮೂತ್ರಪಿಂಡಗಳ ತಪಾಸಣೆ ಹಾಗೂ ಇನ್ನಿತರ ರೋಗಗಳಿಗೆ ಚಿಕಿತ್ಸೆ ಕೊಡಿಸಲಾಗುವುದು’ ಎಂದರು.</p>.<p>‘ಶಿಬಿರದಲ್ಲಿ ಭಾಗವಹಿಸುವವರು ತಮ್ಮ ಎರಡು ಪಾಸ್ಪೋರ್ಟ್ ಸೈಜಿನ ಭಾವಚಿತ್ರ ಆಧಾರ ಕಾರ್ಡ್, ಪಡಿತರ ಚೀಟಿ ತರಬೇಕು’ ಎಂದು ಮಾಹಿತಿಯನ್ನು ನೀಡಿದರು.</p>.<p>‘ಈ ಶಿಬಿರವನ್ನು ಡಿಡಿಯು ಸಮೂಹ ಶಿಕ್ಷಣ ಸಂಸ್ಥೆ ವಡಗೇರಾ, ಸಪ್ತಗಿರಿ ಆಸ್ಪತ್ರೆ ಬೆಂಗಳೂರು, ಸ್ವರಾಧ್ಯ ಎಲುಬು ಮತ್ತು ಕೀಲು ಆಸ್ಪತ್ರೆ ಬೆಂಗಳೂರು, ಶಂಕರ್ ಕಣ್ಣಿನ ಆಸ್ಪತ್ರೆ ಬೆಂಗಳೂರು , ಭೀಮಣ್ಣ ಮೇಟಿ ಫೌಂಡೇಶನ್, ವಿ. ಎಂ .ಎಂ ಟ್ರಸ್ಟ್ ಜಿಲ್ಲಾ ಅಂಧತ್ವ ನಿವಾರಣ ಸಂಸ್ಥೆ ಯಾದಗಿರಿ ವೈದ್ಯಧಿಕಾರಿಗಳು ಹಾಗೂ ನೇತ್ರಾಧಿಕಾರಿಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>ಕಾಲೇಜಿನ ಪ್ರಾಂಶುಪಾಲ ಹೊನ್ನಯ್ಯ ಕೊಂಕಲ್, ಮುಖ್ಯಶಿಕ್ಷಕ ಜಸ್ಟಿನ್ ಕೆ. ಎಸ್, ಖಂಡಪ್ಪ ವರಿಕೇರಿ, ಯೋಗೇಶ ರೆಡ್ಡಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-30-1623956672</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>