<p>ವಡಗೇರಾ: ‘ಮಾನಸಿಕ ನೆಮ್ಮದಿ ಪಡೆಯಬೇಕಾದರೆ ಪಾದಯಾತ್ರೆ, ಧಾರ್ಮಿಕ ಕಾರ್ಯಕ್ರಮ, ದೇವರ ಧ್ಯಾನ ಮಾಡುವದು ಬಹಳ ಅವಶ್ಯ’ ಎಂದು ಅಡವಿಲಿಂಗ ಮಹಾರಾಜರು ಹೇಳಿದರು.</p>.<p>ಸಮೀಪದ ಕೊಳ್ಳೂರು ಗ್ರಾಮದಲ್ಲಿ ಷಣ್ಮುಖಪ್ಪ ಪೂಜಾರಿ ನೇತೃತ್ವದಲ್ಲಿ ಸತತ 7ನೇ ವರ್ಷದ ಕೊಳ್ಳೂರು–ತಿರುಪತಿ ಪಾದಯಾತ್ರೆ ಕೈಗೊಂಡ ಭಕ್ತರಿಗೆ ಆಶೀರ್ವಾದ ನೀಡಿ ಅವರು ಮಾತನಾಡಿದರು.</p>.<p>‘ಇಂದಿನ ಅವಸರದ ಜೀವನದಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಕಷ್ಟು ಜನರಿಗೆ ಆಗುತ್ತಿಲ್ಲ. ಇದರಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗುತಿದ್ದಾರೆ. ಅದರಿಂದ ಹೊರಬರಬೇಕಾದರೆ ವರ್ಷಕ್ಕೆ ಒಮ್ಮೆಯಾದರೂ ಧಾರ್ಮಿಕ ಸ್ಥಳಗಳಿಗೆ ಪಾದಯಾತ್ರೆ ಕೈಗೊಳ್ಳಬೇಕು’ ಎಂದು ತಿಳಿಸಿದರು.</p>.<p>ಜಿ.ಪಂ ಮಾಜಿ ಸದಸ್ಯ ಶ್ರೀನಿವಾಸರಡ್ಡಿ ಚೆನ್ನೂರ ಮಾತನಾಡಿ, ‘ಕಳೆದ 7 ವರ್ಷದಿಂದ ಕೊಳ್ಳೂರು ಗ್ರಾಮದ ಭಕ್ತರು ಪಾದಯಾತ್ರೆ ಕೈಗೊಳ್ಳುತ್ತಿರುವುದು ಶ್ಲಾಘನೀಯ’ ಎಂದು ಹೇಳಿದರು.</p>.<p>ಬಿಜೆಪಿ ಮುಖಂಡರಾದ ಮಹೇಶರಡ್ಡಿ ಮುದ್ನಾಳ ಮಾತನಾಡಿ, ‘ಕಷ್ಟದಲ್ಲಿ ಇದ್ದವರಿಗೆ ಸಹಾಯ , ಸಹಕಾರ ಹಾಗೂ ಪರೋಪಕಾರ ಕಾರ್ಯಗಳನ್ನು ಮಾಡಬೇಕು, ಆಗ ಮಾತ್ರ ಮೋಕ್ಷ ಪಡೆಯಲು ಸಾಧ್ಯ’ ಎಂದು ಅಭಿಪ್ರಾಯ ಪಟ್ಟರು.</p>.<p>ಸುಮಾರು 50ಕ್ಕಿಂತ ಹೆಚ್ಚು ಜನ ಕೊಳ್ಳೂರಿನಿಂದ ತಿರುಪತಿಗೆ ಪಾದಯಾತ್ರೆಯನ್ನು ಕೈಗೊಂಡಿದ್ದಾರೆ.</p>.<p>ದೇವಾಪೂರ ಶಿವಾಚಾರ್ಯರು, ರಾಜಾವೇಣುಗೋಪಾಲ, ಬಸವರಾಜ ಭಂಗಿ, ಅಮಲಯ್ಯ, ಬಸವರಾಜ ಗಿನಕೇರಿ, ವಾಲ್ಮಿಕಿ ನಾಯಕ ರಾಮಣ್ಣ, ನಾಗಪ್ಪ ಹಾಗೂ ಇನ್ನಿತರರು ಇದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-30-1444583370</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಡಗೇರಾ: ‘ಮಾನಸಿಕ ನೆಮ್ಮದಿ ಪಡೆಯಬೇಕಾದರೆ ಪಾದಯಾತ್ರೆ, ಧಾರ್ಮಿಕ ಕಾರ್ಯಕ್ರಮ, ದೇವರ ಧ್ಯಾನ ಮಾಡುವದು ಬಹಳ ಅವಶ್ಯ’ ಎಂದು ಅಡವಿಲಿಂಗ ಮಹಾರಾಜರು ಹೇಳಿದರು.</p>.<p>ಸಮೀಪದ ಕೊಳ್ಳೂರು ಗ್ರಾಮದಲ್ಲಿ ಷಣ್ಮುಖಪ್ಪ ಪೂಜಾರಿ ನೇತೃತ್ವದಲ್ಲಿ ಸತತ 7ನೇ ವರ್ಷದ ಕೊಳ್ಳೂರು–ತಿರುಪತಿ ಪಾದಯಾತ್ರೆ ಕೈಗೊಂಡ ಭಕ್ತರಿಗೆ ಆಶೀರ್ವಾದ ನೀಡಿ ಅವರು ಮಾತನಾಡಿದರು.</p>.<p>‘ಇಂದಿನ ಅವಸರದ ಜೀವನದಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಕಷ್ಟು ಜನರಿಗೆ ಆಗುತ್ತಿಲ್ಲ. ಇದರಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗುತಿದ್ದಾರೆ. ಅದರಿಂದ ಹೊರಬರಬೇಕಾದರೆ ವರ್ಷಕ್ಕೆ ಒಮ್ಮೆಯಾದರೂ ಧಾರ್ಮಿಕ ಸ್ಥಳಗಳಿಗೆ ಪಾದಯಾತ್ರೆ ಕೈಗೊಳ್ಳಬೇಕು’ ಎಂದು ತಿಳಿಸಿದರು.</p>.<p>ಜಿ.ಪಂ ಮಾಜಿ ಸದಸ್ಯ ಶ್ರೀನಿವಾಸರಡ್ಡಿ ಚೆನ್ನೂರ ಮಾತನಾಡಿ, ‘ಕಳೆದ 7 ವರ್ಷದಿಂದ ಕೊಳ್ಳೂರು ಗ್ರಾಮದ ಭಕ್ತರು ಪಾದಯಾತ್ರೆ ಕೈಗೊಳ್ಳುತ್ತಿರುವುದು ಶ್ಲಾಘನೀಯ’ ಎಂದು ಹೇಳಿದರು.</p>.<p>ಬಿಜೆಪಿ ಮುಖಂಡರಾದ ಮಹೇಶರಡ್ಡಿ ಮುದ್ನಾಳ ಮಾತನಾಡಿ, ‘ಕಷ್ಟದಲ್ಲಿ ಇದ್ದವರಿಗೆ ಸಹಾಯ , ಸಹಕಾರ ಹಾಗೂ ಪರೋಪಕಾರ ಕಾರ್ಯಗಳನ್ನು ಮಾಡಬೇಕು, ಆಗ ಮಾತ್ರ ಮೋಕ್ಷ ಪಡೆಯಲು ಸಾಧ್ಯ’ ಎಂದು ಅಭಿಪ್ರಾಯ ಪಟ್ಟರು.</p>.<p>ಸುಮಾರು 50ಕ್ಕಿಂತ ಹೆಚ್ಚು ಜನ ಕೊಳ್ಳೂರಿನಿಂದ ತಿರುಪತಿಗೆ ಪಾದಯಾತ್ರೆಯನ್ನು ಕೈಗೊಂಡಿದ್ದಾರೆ.</p>.<p>ದೇವಾಪೂರ ಶಿವಾಚಾರ್ಯರು, ರಾಜಾವೇಣುಗೋಪಾಲ, ಬಸವರಾಜ ಭಂಗಿ, ಅಮಲಯ್ಯ, ಬಸವರಾಜ ಗಿನಕೇರಿ, ವಾಲ್ಮಿಕಿ ನಾಯಕ ರಾಮಣ್ಣ, ನಾಗಪ್ಪ ಹಾಗೂ ಇನ್ನಿತರರು ಇದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-30-1444583370</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>