<p>ವಡಗೇರಾ: ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭೋತ್ಸವದ ಪ್ರಥಮ ದಿನ ಸೋಮವಾರ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳನ್ನು ಹೂ ಹಾಗೂ ಸಿಹಿ ನೀಡಿ ಬರಮಾಡಿಕೊಂಡರು.</p>.<p>ನಂತರ ಮಾತನಾಡಿದ ಮುಖ್ಯ ಶಿಕ್ಷಕ ಅಯ್ಯಣ್ಣ ಬಡಿಗೇರ, ‘ಈ ವರ್ಷ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರಿಗಾಗಿ ವಿಶೇಷ ತರಗತಿ ಹಾಗೂ ಪರಿಹಾರ ಬೋಧನೆಯನ್ನು ಆರಂಭಿಸಲಾಗುವುದು’ ಎಂದರು.</p>.<p>ಮುಂಬರುವ ದಿನಗಳಲ್ಲಿ ಎಸ್ಎಸ್ಎಲ್ಸಿ ಮಕ್ಕಳಿಗಾಗಿ ಪ್ರತಿವಾರ ವಿಷಯವಾರು ಕಿರು ಪರೀಕ್ಷೆ ನಡೆಸುವುದರ ಜೊತೆಗೆ ವಿಶೇಷ ವೇಳಾಪಟ್ಟಿ ಸಿದ್ದಪಡಿಸಿ ಆ ನಿಟ್ಟಿನಲ್ಲಿ ಶಿಕ್ಷಕರು ಬೋಧನೆ ಮಾಡಲು ಸೂಚಿಸಲಾಗವುದು’ ಎಂದರು.</p>.<p>ಶಿಕ್ಷಕ ಶರಣಪ್ಪ, ಮಲ್ಲಪ್ಪ ಯಂಟಮಾನ, ಕಸ್ತುರಬಾ ವಸತಿ ಶಾಲೆಯ ಮುಖ್ಯ ಶಿಕ್ಷಕಿ ಶ್ರೀದೇವಿ, ಸಾಗರ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-30-20487979</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಡಗೇರಾ: ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭೋತ್ಸವದ ಪ್ರಥಮ ದಿನ ಸೋಮವಾರ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳನ್ನು ಹೂ ಹಾಗೂ ಸಿಹಿ ನೀಡಿ ಬರಮಾಡಿಕೊಂಡರು.</p>.<p>ನಂತರ ಮಾತನಾಡಿದ ಮುಖ್ಯ ಶಿಕ್ಷಕ ಅಯ್ಯಣ್ಣ ಬಡಿಗೇರ, ‘ಈ ವರ್ಷ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರಿಗಾಗಿ ವಿಶೇಷ ತರಗತಿ ಹಾಗೂ ಪರಿಹಾರ ಬೋಧನೆಯನ್ನು ಆರಂಭಿಸಲಾಗುವುದು’ ಎಂದರು.</p>.<p>ಮುಂಬರುವ ದಿನಗಳಲ್ಲಿ ಎಸ್ಎಸ್ಎಲ್ಸಿ ಮಕ್ಕಳಿಗಾಗಿ ಪ್ರತಿವಾರ ವಿಷಯವಾರು ಕಿರು ಪರೀಕ್ಷೆ ನಡೆಸುವುದರ ಜೊತೆಗೆ ವಿಶೇಷ ವೇಳಾಪಟ್ಟಿ ಸಿದ್ದಪಡಿಸಿ ಆ ನಿಟ್ಟಿನಲ್ಲಿ ಶಿಕ್ಷಕರು ಬೋಧನೆ ಮಾಡಲು ಸೂಚಿಸಲಾಗವುದು’ ಎಂದರು.</p>.<p>ಶಿಕ್ಷಕ ಶರಣಪ್ಪ, ಮಲ್ಲಪ್ಪ ಯಂಟಮಾನ, ಕಸ್ತುರಬಾ ವಸತಿ ಶಾಲೆಯ ಮುಖ್ಯ ಶಿಕ್ಷಕಿ ಶ್ರೀದೇವಿ, ಸಾಗರ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-30-20487979</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>