ಅದ್ಧೂರಿ ಮೆರವಣಿಗೆ: ತಾಲ್ಲೂಕಿನ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ.ಎಸ್.ಎಸ್.ಗುಬ್ಬಿ ಅವರನ್ನು ಸಾರೋಟದಲ್ಲಿ ಕುಳ್ಳರಿಸಿ ಪಟ್ಟಣದ ತುಂಬಾ ಮೆರವಣಿಗೆ ಮಾಡಲಾಯಿತು. ಕಸಾಪ ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಕರಿಕಳ್ಳಿ, ಪದಾಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಸಾಥ್ ನೀಡಿದರು. ಸಮ್ಮೇಳನ ನಡೆಯುವ ಸ್ವಾಮಿ ವಿವೇಕಾನಂದ ಪ್ರೌಢಶಾಲಾವರಣದ ವರೆಗೆ ಕರೆದೊಯ್ಯಲಾಯಿತು. ಲಂಬಾಣಿ ಮಹಿಳೆಯರ ನೃತ್ಯ ಗಮನ ಸೆಳೆಯಿತು.