<p><strong>ಸೈದಾಪುರ: ‘</strong>ಇಂದು ಶಾಂತಿ ,ಅಹಿಂಸೆಗೋಸ್ಕರ ನಮ್ಮ ಕುಲ ದೇವತೆ ವಾಸವಿದೇವಿಯು ಅಗ್ನಿ ಪ್ರವೇಶದೊಂದಿಗೆ ಪ್ರಾಣ ತ್ಯಾಗ ಮಾಡಿ, ದೇವತೆಯ ರೂಪದಲ್ಲಿ ದಿವ್ಯ ದರ್ಶನ ನೀಡಿ ಜಗತ್ತನ್ನು ಜಯಿಸಿದ ದಿನವಾಗಿದೆ’ ಎಂದು ಕರ್ನಾಟಕ ರಾಜ್ಯ ಆರ್ಯ ವೈಶ್ಯ ಮಹಾಸಭಾದ ನಿರ್ದೇಶಕ ರಾಘವೇಂದ್ರ ಬಾದಾಮಿ ಹೇಳಿದರು.</p>.<p>ಪಟ್ಟದ ವಾಸವಿ ವಿದ್ಯಾಸಂಸ್ಥೆ ಆವರಣದಲ್ಲಿ ವಾಸವಿದೇವಿ ಅಗ್ನಿಪ್ರವೇಶ ದಿನದ ಪ್ರಯುಕ್ತ ಆರ್ಯ ವೈಶ್ಯ ಸಮಾಜದಿಂದ ಹಮ್ಮಿಕೊಂಡಿದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>‘ವೈಶ್ಯ ಸಮಾಜವು ಅಹಿಂಸೆ, ತ್ಯಾಗ ನಂಬಿದ ಜನಾಂಗವಾಗಿದೆ. ಈ ಸಮಾಜದಲ್ಲಿ ಜನಿಸಿದ ನಾವುಗಳು ಧನ್ಯರು. ಆದರಿಂದ ನಾವು ನಮ್ಮ ಜೀವನದಲ್ಲಿ ಧರ್ಮದ ನಿಯಮಗಳನ್ನು ಪಾಲಿಸಿದಾಗ, ನಮ್ಮ ನಡತೆ ಸಮಾಜಕ್ಕೆ ಮಾದರಿಯಾಗುತ್ತದೆ. ಇದು ವ್ಯಕ್ತಿಗತವಾಗಿ ಮತ್ತು ಸಮುದಾಯದ ಮಟ್ಟದಲ್ಲಿ ರಕ್ಷಣೆ ನೀಡುತ್ತದೆ. ಧರ್ಮವನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವುದು ಅವಶ್ಯಕವಾಗಿದೆ. ತಂದೆ-ತಾಯಿಯಿಂದ ಮಕ್ಕಳಿಗೆ ಮತ್ತು ಗುರುಗಳಿಂದ ಶಿಷ್ಯರಿಗೆ ಸಂಪ್ರದಾಯಗಳನ್ನು ಹಸ್ತಾಂತರಿಸುವ ಮೂಲಕ ಇದನ್ನು ಇತಂಹ ನೈತಿಕತೆಯ ಧಾರ್ಮಿಕ ಸಂಪ್ರದಾಯಗಳನ್ನು ಬೆಳಸಿಕೊಂಡು ಹೋಗುವುದು ನಮ್ಮ ಸಮಾಜದ ಪ್ರತಿಯೊಬ್ಬರ ಕರ್ತವ್ಯವಾಗಿದೆ’ ಎಂದರು.</p>.<p>ಇದಕ್ಕೂ ಮುಂಚಿತವಾಗಿ ಆರ್ಯವೈಶ್ಯ ಮಹಿಳಾ ಸಂಘದಿಂದ ದೇವಿಗೆ ಮತ್ತು ಗೋವಿಗೆ ವಿವಿಧ ತರಹದ ಹೂಗಳಿಂದ ಅಲಂಕಾರ ಮಾಡಿ, ಭಕ್ತಿಗೀತೆ, ಭಜನೆ ಗೀತೆಗಳನ್ನು ಹಾಡಿ ವಿಶೇಷ ಪೂಜೆ ಸಲ್ಲಿಸಿದ್ದರು. ನಂತರ ಶಾಲಾ ಮಕ್ಕಳಿಗೆ ಮತ್ತು ಆಗಮಿಸಿದ ಭಕ್ತರಿಗೆ ಸಿಹಿಊಟದ ಪ್ರಸಾದವನ್ನು ನೀಡಲಾಯಿತು.</p>.<p>ಈ ವೇಳೆ ಆರ್ಯವೈಶ್ಯ ಸಮಾಜದ ಅಧ್ಯಕ್ಷ ಕೃಷ್ಣ ಗುಜ್ಜಾ, ಮಹಿಳಾ ಸಂಘದ ಅಧ್ಯಕ್ಷೆ ವಸಂತಮ್ಮ ಮಿರಿಯಲ್, ವಾಸವಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ವೆಂಕಟೇಶ ಪಾಲದಿ ಸೇರಿದಂತೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೈದಾಪುರ: ‘</strong>ಇಂದು ಶಾಂತಿ ,ಅಹಿಂಸೆಗೋಸ್ಕರ ನಮ್ಮ ಕುಲ ದೇವತೆ ವಾಸವಿದೇವಿಯು ಅಗ್ನಿ ಪ್ರವೇಶದೊಂದಿಗೆ ಪ್ರಾಣ ತ್ಯಾಗ ಮಾಡಿ, ದೇವತೆಯ ರೂಪದಲ್ಲಿ ದಿವ್ಯ ದರ್ಶನ ನೀಡಿ ಜಗತ್ತನ್ನು ಜಯಿಸಿದ ದಿನವಾಗಿದೆ’ ಎಂದು ಕರ್ನಾಟಕ ರಾಜ್ಯ ಆರ್ಯ ವೈಶ್ಯ ಮಹಾಸಭಾದ ನಿರ್ದೇಶಕ ರಾಘವೇಂದ್ರ ಬಾದಾಮಿ ಹೇಳಿದರು.</p>.<p>ಪಟ್ಟದ ವಾಸವಿ ವಿದ್ಯಾಸಂಸ್ಥೆ ಆವರಣದಲ್ಲಿ ವಾಸವಿದೇವಿ ಅಗ್ನಿಪ್ರವೇಶ ದಿನದ ಪ್ರಯುಕ್ತ ಆರ್ಯ ವೈಶ್ಯ ಸಮಾಜದಿಂದ ಹಮ್ಮಿಕೊಂಡಿದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>‘ವೈಶ್ಯ ಸಮಾಜವು ಅಹಿಂಸೆ, ತ್ಯಾಗ ನಂಬಿದ ಜನಾಂಗವಾಗಿದೆ. ಈ ಸಮಾಜದಲ್ಲಿ ಜನಿಸಿದ ನಾವುಗಳು ಧನ್ಯರು. ಆದರಿಂದ ನಾವು ನಮ್ಮ ಜೀವನದಲ್ಲಿ ಧರ್ಮದ ನಿಯಮಗಳನ್ನು ಪಾಲಿಸಿದಾಗ, ನಮ್ಮ ನಡತೆ ಸಮಾಜಕ್ಕೆ ಮಾದರಿಯಾಗುತ್ತದೆ. ಇದು ವ್ಯಕ್ತಿಗತವಾಗಿ ಮತ್ತು ಸಮುದಾಯದ ಮಟ್ಟದಲ್ಲಿ ರಕ್ಷಣೆ ನೀಡುತ್ತದೆ. ಧರ್ಮವನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವುದು ಅವಶ್ಯಕವಾಗಿದೆ. ತಂದೆ-ತಾಯಿಯಿಂದ ಮಕ್ಕಳಿಗೆ ಮತ್ತು ಗುರುಗಳಿಂದ ಶಿಷ್ಯರಿಗೆ ಸಂಪ್ರದಾಯಗಳನ್ನು ಹಸ್ತಾಂತರಿಸುವ ಮೂಲಕ ಇದನ್ನು ಇತಂಹ ನೈತಿಕತೆಯ ಧಾರ್ಮಿಕ ಸಂಪ್ರದಾಯಗಳನ್ನು ಬೆಳಸಿಕೊಂಡು ಹೋಗುವುದು ನಮ್ಮ ಸಮಾಜದ ಪ್ರತಿಯೊಬ್ಬರ ಕರ್ತವ್ಯವಾಗಿದೆ’ ಎಂದರು.</p>.<p>ಇದಕ್ಕೂ ಮುಂಚಿತವಾಗಿ ಆರ್ಯವೈಶ್ಯ ಮಹಿಳಾ ಸಂಘದಿಂದ ದೇವಿಗೆ ಮತ್ತು ಗೋವಿಗೆ ವಿವಿಧ ತರಹದ ಹೂಗಳಿಂದ ಅಲಂಕಾರ ಮಾಡಿ, ಭಕ್ತಿಗೀತೆ, ಭಜನೆ ಗೀತೆಗಳನ್ನು ಹಾಡಿ ವಿಶೇಷ ಪೂಜೆ ಸಲ್ಲಿಸಿದ್ದರು. ನಂತರ ಶಾಲಾ ಮಕ್ಕಳಿಗೆ ಮತ್ತು ಆಗಮಿಸಿದ ಭಕ್ತರಿಗೆ ಸಿಹಿಊಟದ ಪ್ರಸಾದವನ್ನು ನೀಡಲಾಯಿತು.</p>.<p>ಈ ವೇಳೆ ಆರ್ಯವೈಶ್ಯ ಸಮಾಜದ ಅಧ್ಯಕ್ಷ ಕೃಷ್ಣ ಗುಜ್ಜಾ, ಮಹಿಳಾ ಸಂಘದ ಅಧ್ಯಕ್ಷೆ ವಸಂತಮ್ಮ ಮಿರಿಯಲ್, ವಾಸವಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ವೆಂಕಟೇಶ ಪಾಲದಿ ಸೇರಿದಂತೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>