ನಗರದ ಹೊಸ ಬಸ್ ನಿಲ್ದಾಣದಲ್ಲಿ ಶನಿವಾರ ಕೆಲಹೊತ್ತು ಮಲಗಿ ಏಕಾಂಗಿ ಪ್ರತಿಭಟನೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವೈಮಾನಿಕ ಸಮೀಕ್ಷೆ ಮೇಲಿನಿಂದ ಮಾಡಿದ್ದಾರೆ. ಆದರೆ, ಕೆಳಗೆ ಇಳಿದು ಮಾಡಿದ್ದರೆ ಜನರ ಪರಿಸ್ಥಿತಿ ಅರ್ಥವಾಗುತ್ತಿತ್ತು. ಅದನ್ನು ಅವರು ಮಾಡಿಲ್ಲ’ ಎಂದು ದೂರಿದರು.