<p><strong>ವಡಗೇರಾ:</strong> ತಾಲ್ಲೂಕಿನ ಹಾಲಗೇರಾ ಜಾತ್ರೆ ಮುಗಿಸಿಕೊಂಡು ಬೈಕ್ ಮೇಲೆ ಸ್ವಗ್ರಾಮ ವಡಗೇರಾಕ್ಕೆ ಬರುತ್ತಿದ್ದ ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ಪಟ್ಟಣ ಹೊರವಲಯದ ಭಾರತ ಪೆಟ್ರೋಲ್ ಬಂಕ್ ಸಮೀಪ ಭಾನುವಾರ ರಾತ್ರಿ ಸಂಭವಿಸಿದೆ.</p>.<p>ಮುನಿಯಪ್ಪ ಚಂದ್ರಯ್ಯ ದಾಸರ (28), ದೇವಪ್ಪ ರಂಗಪ್ಪ ದಾಸರ (30) ಮೃತಪಟ್ಟಿದ್ದಾರೆ.</p>.<p>ಅಪಘಾತದ ರಭಸಕ್ಕೆ ಮುನಿಯಪ್ಪ ದಾಸರ ಪಕ್ಕದ ಜಮೀನಲ್ಲಿ ಬಿದ್ದು ಮೃತಪಟ್ಟಿದ್ದಾನೆ. ದೇವಪ್ಪ ದಾಸರ ಎಂಬ ಯುವಕನನ್ನು ಹೆಚ್ಚಿನ ಚಿಕಿತ್ಸೆಗೆಂದು ಕಲಬುರ್ಗಿಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲಿ ಅಸುನೀಗಿದ್ದಾನೆ.</p>.<p>‘ಗೋಡಿಹಾಳ ಗ್ರಾಮದಿಂದ ಬರುವಾಗ ಹಾಲಗೇರಾ ಯಲ್ಲಮ್ಮನ ಜಾತ್ರೆಯಲ್ಲಿ ಮಂಡಕ್ಕಿ ತೆಗೆದುಕೊಂಡು ವಡಗೇರಾ ಪಟ್ಟಣಕ್ಕೆ ಹಿಂತಿರುಗುವಾಗ ಈ ಅಪಘಾತ ಸಂಭವಿಸಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Subhead">ಸಾಂತ್ವನ: ಅಪಘಾತದಲ್ಲಿ ಮೃತಪಟ್ಟವರ ಮನೆಗಳಿಗೆ ವಿಧಾನ ಪರಿಷತ್ ಮಾಜಿ ಸದಸ್ಯ ಚನ್ನಾರಡ್ಡಿ ಪಾಟೀಲ ತುನ್ನೂರು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಜೊತೆಗೆ ಎರಡು ಕುಟುಂಬಗಳಿಗೆ ತಲಾ ₹5 ಸಾವಿರ ವೈಯಕ್ತಿಕ ನೆರವು ನೀಡಿದರು.</p>.<p>ಕಾಂಗ್ರೆಸ್ ಮುಖಂಡರಾದ ಬಸವರಾಜ ಸೊನ್ನದ್, ಬನ್ನಪ್ಪಗೌಡ, ಸುಬ್ಬಣಗೌಡ, ಸೈಯದ್ ಅಲಿ, ಮಲ್ಲು ಹೆರುಂಡಿ, ದೇವು ಜಡಿ, ತಿರುಕಪ್ಪ, ಮಹಾದೇವಪ್ಪ ಗೋನಾಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ:</strong> ತಾಲ್ಲೂಕಿನ ಹಾಲಗೇರಾ ಜಾತ್ರೆ ಮುಗಿಸಿಕೊಂಡು ಬೈಕ್ ಮೇಲೆ ಸ್ವಗ್ರಾಮ ವಡಗೇರಾಕ್ಕೆ ಬರುತ್ತಿದ್ದ ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ಪಟ್ಟಣ ಹೊರವಲಯದ ಭಾರತ ಪೆಟ್ರೋಲ್ ಬಂಕ್ ಸಮೀಪ ಭಾನುವಾರ ರಾತ್ರಿ ಸಂಭವಿಸಿದೆ.</p>.<p>ಮುನಿಯಪ್ಪ ಚಂದ್ರಯ್ಯ ದಾಸರ (28), ದೇವಪ್ಪ ರಂಗಪ್ಪ ದಾಸರ (30) ಮೃತಪಟ್ಟಿದ್ದಾರೆ.</p>.<p>ಅಪಘಾತದ ರಭಸಕ್ಕೆ ಮುನಿಯಪ್ಪ ದಾಸರ ಪಕ್ಕದ ಜಮೀನಲ್ಲಿ ಬಿದ್ದು ಮೃತಪಟ್ಟಿದ್ದಾನೆ. ದೇವಪ್ಪ ದಾಸರ ಎಂಬ ಯುವಕನನ್ನು ಹೆಚ್ಚಿನ ಚಿಕಿತ್ಸೆಗೆಂದು ಕಲಬುರ್ಗಿಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲಿ ಅಸುನೀಗಿದ್ದಾನೆ.</p>.<p>‘ಗೋಡಿಹಾಳ ಗ್ರಾಮದಿಂದ ಬರುವಾಗ ಹಾಲಗೇರಾ ಯಲ್ಲಮ್ಮನ ಜಾತ್ರೆಯಲ್ಲಿ ಮಂಡಕ್ಕಿ ತೆಗೆದುಕೊಂಡು ವಡಗೇರಾ ಪಟ್ಟಣಕ್ಕೆ ಹಿಂತಿರುಗುವಾಗ ಈ ಅಪಘಾತ ಸಂಭವಿಸಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Subhead">ಸಾಂತ್ವನ: ಅಪಘಾತದಲ್ಲಿ ಮೃತಪಟ್ಟವರ ಮನೆಗಳಿಗೆ ವಿಧಾನ ಪರಿಷತ್ ಮಾಜಿ ಸದಸ್ಯ ಚನ್ನಾರಡ್ಡಿ ಪಾಟೀಲ ತುನ್ನೂರು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಜೊತೆಗೆ ಎರಡು ಕುಟುಂಬಗಳಿಗೆ ತಲಾ ₹5 ಸಾವಿರ ವೈಯಕ್ತಿಕ ನೆರವು ನೀಡಿದರು.</p>.<p>ಕಾಂಗ್ರೆಸ್ ಮುಖಂಡರಾದ ಬಸವರಾಜ ಸೊನ್ನದ್, ಬನ್ನಪ್ಪಗೌಡ, ಸುಬ್ಬಣಗೌಡ, ಸೈಯದ್ ಅಲಿ, ಮಲ್ಲು ಹೆರುಂಡಿ, ದೇವು ಜಡಿ, ತಿರುಕಪ್ಪ, ಮಹಾದೇವಪ್ಪ ಗೋನಾಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>