ವಡಗೇರಾ: ತಾಲ್ಲೂಕಿನ ಹಾಲಗೇರಾ ಜಾತ್ರೆ ಮುಗಿಸಿಕೊಂಡು ಬೈಕ್ ಮೇಲೆ ಸ್ವಗ್ರಾಮ ವಡಗೇರಾಕ್ಕೆ ಬರುತ್ತಿದ್ದ ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ಪಟ್ಟಣ ಹೊರವಲಯದ ಭಾರತ ಪೆಟ್ರೋಲ್ ಬಂಕ್ ಸಮೀಪ ಭಾನುವಾರ ರಾತ್ರಿ ಸಂಭವಿಸಿದೆ.
ಅಪಘಾತದ ರಭಸಕ್ಕೆ ಮುನಿಯಪ್ಪ ದಾಸರ ಪಕ್ಕದ ಜಮೀನಲ್ಲಿ ಬಿದ್ದು ಮೃತಪಟ್ಟಿದ್ದಾನೆ. ದೇವಪ್ಪ ದಾಸರ ಎಂಬ ಯುವಕನನ್ನು ಹೆಚ್ಚಿನ ಚಿಕಿತ್ಸೆಗೆಂದು ಕಲಬುರ್ಗಿಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲಿ ಅಸುನೀಗಿದ್ದಾನೆ.
‘ಗೋಡಿಹಾಳ ಗ್ರಾಮದಿಂದ ಬರುವಾಗ ಹಾಲಗೇರಾ ಯಲ್ಲಮ್ಮನ ಜಾತ್ರೆಯಲ್ಲಿ ಮಂಡಕ್ಕಿ ತೆಗೆದುಕೊಂಡು ವಡಗೇರಾ ಪಟ್ಟಣಕ್ಕೆ ಹಿಂತಿರುಗುವಾಗ ಈ ಅಪಘಾತ ಸಂಭವಿಸಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಂತ್ವನ: ಅಪಘಾತದಲ್ಲಿ ಮೃತಪಟ್ಟವರ ಮನೆಗಳಿಗೆ ವಿಧಾನ ಪರಿಷತ್ ಮಾಜಿ ಸದಸ್ಯ ಚನ್ನಾರಡ್ಡಿ ಪಾಟೀಲ ತುನ್ನೂರು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಜೊತೆಗೆ ಎರಡು ಕುಟುಂಬಗಳಿಗೆ ತಲಾ ₹5 ಸಾವಿರ ವೈಯಕ್ತಿಕ ನೆರವು ನೀಡಿದರು.
ಕಾಂಗ್ರೆಸ್ ಮುಖಂಡರಾದ ಬಸವರಾಜ ಸೊನ್ನದ್, ಬನ್ನಪ್ಪಗೌಡ, ಸುಬ್ಬಣಗೌಡ, ಸೈಯದ್ ಅಲಿ, ಮಲ್ಲು ಹೆರುಂಡಿ, ದೇವು ಜಡಿ, ತಿರುಕಪ್ಪ, ಮಹಾದೇವಪ್ಪ ಗೋನಾಲ ಇದ್ದರು.