ಉತ್ತರ ಕರ್ನಾಟಕ ಭಾಗವವರು ಜೆಡಿಸ್ ಬೆಂಬಲಿಸಿಲ್ಲ ಎನ್ನುವ ಕಾರಣಕ್ಕಾಗಿ ಈ ಭಾಗವನ್ನು ನಿರ್ಲಕ್ಷ್ಯಿಸಲಾಗಿದೆ ಎನ್ನುವ ಆರೋಪದ ಮಧ್ಯೆ ಹೈದರಾಬಾದ್ ಕರ್ನಾಟಕದ ಯಾದಗಿರಿ ಜಿಲ್ಲೆಯಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಕುಮಾರಸ್ವಾಮಿಯವರು ಈ ಹಿಂದೆ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಕನ್ನಳ್ಳಿ ಗ್ರಾಮದಲ್ಲಿ ವಾಸ್ತವ್ಯ ಮಾಡಿದ್ದರು.
ಗುರುಮಠಕಲ್ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರು ಕ್ಷೇತ್ರ. ಮೊದಲಿಗೆ ಜೆಡಿಎಸ್ ಪ್ರಾಬಲ್ಯ ಇರುವ ಕಡೆ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಲು ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ. ಈಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಶಹಾಪುರ ನಗರಸಭೆಯಲ್ಲಿ ಜೆಡಿಎಸ್ ಶೂನ್ಯ ಸಾಧನೆ ಮಾಡಿದೆ. ಅಲ್ಲದೆ ಈ ಭಾಗದಲ್ಲಿ ಜೆಡಿಎಸ್ ಸಾಧನೆ ಅಷ್ಟೇನೂ ಸಮಾಧಾನಕರವಾಗಿಲ್ಲ. ಹೀಗಾಗಿ ಇಲ್ಲಿ ಗ್ರಾಮ ವಾಸ್ತವ್ಯ ಮೂಲಕ ಜನತೆಗೆ ಹತ್ತಿರವಾಗಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.