ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಚಂಡರಕಿ ಗ್ರಾಮದಲ್ಲಿ ಜೂನ್ 21ರಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಲಿರುವ ಹಿನ್ನೆಲೆಯನ್ನು ಭಾನುವಾರ ಅಧಿಕಾರಿಗಳು ಭೇಟಿ ಪರಿಶೀಲಿಸಿದರು.
ಸಿಎಂ ಗ್ರಾಮ ವಾಸ್ತವ್ಯಕ್ಕೆ ಚಂಡರಕಿ ಗ್ರಾಮ ಅಂತಿಮವಾಗಿದ್ದರಿಂದ ಗ್ರಾಮಕ್ಕೆ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್, ಜಿಲ್ಲಾ ಪಂಚಾಯಿತಿ ಸಿಇಒ ಕವಿತಾ ಎಸ್.ಮನ್ನಿಕೇರಿ ಹಾಗೂ ಎಸ್ಪಿ ಋಷಿಕೇಶ್ ಭಗವಾನ್ ಭೇಟಿ ನೀಡಿದರು.
ಗ್ರಾಮದ ಶಾಲೆ, ಹೆಲಿಕಾಪ್ಟರ್ ಲ್ಯಾಂಡಿಂಗ್ ಸ್ಥಳ, ಪಾರ್ಕಿಂಗ್ ಸ್ಥಳ, ವಾಹನ ಸಂಚರಿಸುವ ರಸ್ತೆ ಪರಿಶೀಲಿಸಿದರು.