ಈ ಕುರಿತು ಹೇಳಿಕೆ ನೀಡಿರುವ ಎಐಯುಟಿಸಿಐ ರಾಜ್ಯ ಕಾರ್ಯದರ್ಶಿ ಕೆ.ಸೋಮಶೇಖರ, ‘ಜಿಲ್ಲಾಧಿಕಾ ರಿಯವರು ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಪಷ್ಟನೆ ಕೇಳಬೇಕು. ಇದು ಗಂಭೀರ ಲೋಪ. ಬಿಜೆಪಿಯವರು ತಮಗೆ ಬೇಕಾದಂತೆ ಎಲ್ಲ ವಿಷಯಗಳನ್ನು ರಾಜಕಾರಣ ಗೊಳಿಸುತ್ತಾರೆ. ಇದು ಅವರ ಸ್ವಭಾವವಾಗಿದೆ. ಸ್ವತಃ ಜಿಲ್ಲಾ ಉಸ್ತುವಾರಿ ಸಚಿವರೇ ಇಂಥ ಮಾತು ಹೇಳುವುದು ಪಂಚಾಯತ್ ರಾಜ್ ವ್ಯವಸ್ಥೆಯ ಮೂಲ ಉದ್ದೇಶವನ್ನು ಹಾಳು ಮಾಡಿದಂತಾಗಿದೆ. ಜಿಲ್ಲಾಧಿಕಾರಿ ನಿರ್ಭಯವಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿದ್ದಾರೆ.