ಯಾದಗಿರಿ: ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಶ್ವಕರ್ಮ ಜಯಂತ್ಯುತ್ಸವದ ನಿಮಿತ್ತ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್., ಅವರು ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ವಿಶ್ವಕರ್ಮಜಯಂತ್ಯುತ್ಸವ ಸಮಿತಿ ಆಶ್ರಯದಲ್ಲಿ ವಿಶ್ವಕರ್ಮ ಅವರ ಜಯಂತ್ಯುತ್ಸವವನ್ನು ಸರಳವಾಗಿ ಆಚರಿಸಲಾಯಿತು.
ಕಲ್ಯಾಣ ಕರ್ನಾಟಕ ಉತ್ಸವ ಸಮಿತಿಯ ಜಿಲ್ಲಾ ಉಸ್ತುವಾರಿ ಮಹೇಶ ವಿಶ್ವಕರ್ಮ ತಡಿಬಿಡಿ, ದೇವಿಂದ್ರಪ್ಪ ಎಲ್ ವಡಿಗೇರಾ, ವಿಶ್ವಕರ್ಮ ಅಭಿವೃದ್ಧಿ ನಿಗಮದ ನಾಮ ನಿರ್ದೇಶನ ಸದಸ್ಯ ಬಸವರಾಜ ವಿಶ್ವಕರ್ಮ ಹಾಗೂ ವಿಶ್ವಕರ್ಮ ಮಹಾಸಭಾದ ಜಿಲ್ಲಾ ಉಪಾಧ್ಯಕ್ಷ ಶಿವಣ್ಣ ಊನೂರು ಇದ್ದರು.
ಈ ವೇಳೆ ವಿ. ಗುರುಲಿಂಗಾಚಾರ್ ಅವರು ಬರೆದ ವಿಶ್ವಕರ್ಮ ಮಹಿಮೆ ಪುಸ್ತಕವನ್ನು ಜಿಲ್ಲಾಧಿಕಾರಿ ಬಿಡುಗಡೆ ಮಾಡಿದರು.