ಸೈದಾಪುರ: ಸ್ವಾಮಿ ವಿವೇಕಾನಂದರ ಜೀವನದ ತತ್ವಾದರ್ಶಗಳನ್ನು ಅರಿತು ಜೀವನದಲ್ಲಿ ಅಳವಡಿಸಿಕೊಂಡು ಸದೃಢ ಭಾರತದ ನಿರ್ಮಾಣಕ್ಕೆ ಭಾರತೀಯರು ಸಿದ್ಧರಾಗಬೇಕು ಎಂದು ಮುಖ್ಯಶಿಕ್ಷಕ ಬಿ. ಬಿ. ವಡವಟ್ ಹೇಳಿದರು.
ಪಟ್ಟಣದ ವಾಸವಿ ವಿದ್ಯಾ ಸಂಸ್ಥೆಯಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮೊದಲು ಪ್ರತಿಯೊಬ್ಬರು ಉತ್ತಮ ಮಾರ್ಗಗಳಿಂದ ಸಾಮಾಜಿಕವಾಗಿ, ಶೈಕ್ಷಣಿಕ, ಆರ್ಥಿಕವಾಗಿ ಸದೃಢವಾಗಬೇಕು. ಮಹಾನ್ ಪುಣ್ಯ ಪುರುಷ ವಿವೇಕಾನಂದರ ಜೀವನ ಚರಿತ್ರೆಯನ್ನು ಮುಂದಿಟ್ಟುಕೊಂಡು ನಿಮ್ಮ ದೃಢ ನಿಶ್ಚಯದಂತೆ ಉತ್ತಮ ಕಾರ್ಯಗಳನ್ನು ಮಾಡಿದರೆ ಜಗತ್ತು ನಿಮ್ಮ ಕಾಲಿಗೆ ಬೀಳುವುದರಲ್ಲಿ ಯಾವುದೆ ಸಂದೇಹ ಬೇಡ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕಿ ರಾಧ ಸಂಗೋಳಿಗಿ, ಕಾಸಿಂಬಿ ಐ ಕೋನಂಪಲ್ಲಿ, ಸಂತೋಷ ದೇಸಾಯಿ, ಮಹೇಶ ಕೊಂಡಾಪುರ, ದೇವೇಂದ್ರಕುಮಾರ ಬಾಗ್ಲಿ ಮುನಗಾಲ, ಚಂದ್ರಕಲಾ , ಸೃತಿ ಜಾರ್ಜ್ ಕೇರಳ, ಬಸಮ್ಮ ಕಲಬುರಗಿ ಸೇರಿದಂತೆ ಇತರರಿದ್ದರು.