ವಿಶ್ವ ಆರೋಗ್ಯ ಸಂಸ್ಥೆಯ ನಿಯಮಗಳನ್ವಯ ಪ್ರತಿ 1,000 ಜನಸಂಖ್ಯೆಗೆ ಒಬ್ಬ ವೈದ್ಯರು ಇರಬೇಕಾಗಿದ್ದು, ಸದ್ಯ ರಾಜ್ಯದಲ್ಲಿ 13,556 ಜನಸಂಖ್ಯೆಗೆ ಒಬ್ಬ ವೈದ್ಯರು ಇದ್ದಾರೆ. ಈ ಅಸಮತೋಲನವನ್ನು ಸರಿಪಡಿಸಲು ಹಾಗೂ ರಾಜ್ಯದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಲು ಸರ್ಕಾರ ವೈದ್ಯಕೀಯ ಕಾಲೇಜು ಇರದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ತರಲು ನಿರ್ಧರಿಸಿದ್ದು, ಸಂತೋಷದ ವಿಷಯವಾಗಿದೆ ಎಂದಿದ್ದಾರೆ.