<p><strong>ಸೈದಾಪುರ:</strong> ‘ಯುವಕರು ತಮ್ಮ ಮತದಾನದ ಹಕ್ಕುಗಳನ್ನು ಅತ್ಯಂತ ಪ್ರಾಮಾಣಿಕತೆಯಿಂದ ಚಲಾಯಿಸಬೇಕು’ ಎಂದು ಪ್ರಭಾರ ಉಪತಹಸೀಲ್ದಾರ್ ದಸ್ತಗಿರಿ ನಾಯಕ ಹೇಳಿದರು.</p>.<p>ಪಟ್ಟಣದ ವಿದ್ಯಾವರ್ಧಕ ಸಂಸ್ಥೆಯಲ್ಲಿ ಕಂದಾಯ ಇಲಾಖೆ ವತಿಯಿಂದ ಹಮ್ಮಿಕೊಂಡ ‘ರಾಷ್ಟ್ರೀಯ ಮತದಾರರ ದಿನ’ ಆಚರಣೆ ಪ್ರತಿಜ್ಞಾನವಿಧಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. </p>.<p>‘ದೇಶದ ಮತದಾರರಿಗೆ ಮೀಸಲಾಗಿರುವ ಈ ದಿನವನ್ನು ಚುನಾವಣಾ ಪ್ರಕ್ರಿಯೆಯಲ್ಲಿ ತಿಳಿವಳಿಕೆಯಿಂದ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಮತದಾರರಲ್ಲಿ ಜಾಗೃತಿ ಮೂಡಿಸಲು ಬಳಸಲಾಗುತ್ತದೆ. ಮತದಾರರು ತಮ್ಮ ಅಮೂಲ್ಯವಾದ ಮತವನ್ನು ದೇಶದ ಹಿತವನ್ನು ಕಾಯುವ ಹಾಗೂ ಶಿಕ್ಷಣವಂತ ನಾಗರಿಕರಿಗೆ ನೀಡಿ ಅವರನ್ನು ಆರಿಸಿ ತರಬೇಕು’ ಎಂದರು.</p>.<p>‘ಮತವನ್ನು ಕೇವಲ ಹಣ, ಬಟ್ಟೆ, ಬಂಗಾರ, ಮದ್ಯಪಾನಗಳಿಗೆ ಮಾರಿಕೊಳ್ಳದೆ ಪ್ರಗತಿಗರ ಸಹಕರಿಸುವವರಿಗೆ ನೀಡಿ. ಯುವಕರು ತಮ್ಮ ಹಕ್ಕುಗಳನ್ನು ಅತ್ಯಂತ ಪ್ರಾಮಾಣಿಕತೆಯಿಂದ ಚಲಾಯಿಸುವುದು ಮತ್ತು ಇತರರನ್ನು ಸಹ ಹಾಗೆ ಮಾಡಲು ಪ್ರೇರೇಪಿಸಬೇಕು’ ಎಂದರು.</p>.<p>ಈ ಸಂದರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿ ಮಡಿವಾಳಪ್ಪ, ಮುಖ್ಯಶಿಕ್ಷಕ ಲಿಂಗಾರೆಡ್ಡಿ ನಾಯಕ, ಪ್ರಾಂಶುಪಾಲ ಕರಬಸಯ್ಯ ದಂಡಿಗಿಮಠ, ಹಿರಿಯ ಶಿಕ್ಷಕ ಗೂಳಪ್ಪ, ಎಸ್.ಮಲ್ಹಾರ, ಹಣಮರೆಡ್ಡಿ ಮೋಟ್ನಳ್ಳಿ, ಸಂಗಾರೆಡ್ಡಿ ಪಾಟೀಲ, ಶೋಭಾ ಸೇರಿದಂತೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೈದಾಪುರ:</strong> ‘ಯುವಕರು ತಮ್ಮ ಮತದಾನದ ಹಕ್ಕುಗಳನ್ನು ಅತ್ಯಂತ ಪ್ರಾಮಾಣಿಕತೆಯಿಂದ ಚಲಾಯಿಸಬೇಕು’ ಎಂದು ಪ್ರಭಾರ ಉಪತಹಸೀಲ್ದಾರ್ ದಸ್ತಗಿರಿ ನಾಯಕ ಹೇಳಿದರು.</p>.<p>ಪಟ್ಟಣದ ವಿದ್ಯಾವರ್ಧಕ ಸಂಸ್ಥೆಯಲ್ಲಿ ಕಂದಾಯ ಇಲಾಖೆ ವತಿಯಿಂದ ಹಮ್ಮಿಕೊಂಡ ‘ರಾಷ್ಟ್ರೀಯ ಮತದಾರರ ದಿನ’ ಆಚರಣೆ ಪ್ರತಿಜ್ಞಾನವಿಧಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. </p>.<p>‘ದೇಶದ ಮತದಾರರಿಗೆ ಮೀಸಲಾಗಿರುವ ಈ ದಿನವನ್ನು ಚುನಾವಣಾ ಪ್ರಕ್ರಿಯೆಯಲ್ಲಿ ತಿಳಿವಳಿಕೆಯಿಂದ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಮತದಾರರಲ್ಲಿ ಜಾಗೃತಿ ಮೂಡಿಸಲು ಬಳಸಲಾಗುತ್ತದೆ. ಮತದಾರರು ತಮ್ಮ ಅಮೂಲ್ಯವಾದ ಮತವನ್ನು ದೇಶದ ಹಿತವನ್ನು ಕಾಯುವ ಹಾಗೂ ಶಿಕ್ಷಣವಂತ ನಾಗರಿಕರಿಗೆ ನೀಡಿ ಅವರನ್ನು ಆರಿಸಿ ತರಬೇಕು’ ಎಂದರು.</p>.<p>‘ಮತವನ್ನು ಕೇವಲ ಹಣ, ಬಟ್ಟೆ, ಬಂಗಾರ, ಮದ್ಯಪಾನಗಳಿಗೆ ಮಾರಿಕೊಳ್ಳದೆ ಪ್ರಗತಿಗರ ಸಹಕರಿಸುವವರಿಗೆ ನೀಡಿ. ಯುವಕರು ತಮ್ಮ ಹಕ್ಕುಗಳನ್ನು ಅತ್ಯಂತ ಪ್ರಾಮಾಣಿಕತೆಯಿಂದ ಚಲಾಯಿಸುವುದು ಮತ್ತು ಇತರರನ್ನು ಸಹ ಹಾಗೆ ಮಾಡಲು ಪ್ರೇರೇಪಿಸಬೇಕು’ ಎಂದರು.</p>.<p>ಈ ಸಂದರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿ ಮಡಿವಾಳಪ್ಪ, ಮುಖ್ಯಶಿಕ್ಷಕ ಲಿಂಗಾರೆಡ್ಡಿ ನಾಯಕ, ಪ್ರಾಂಶುಪಾಲ ಕರಬಸಯ್ಯ ದಂಡಿಗಿಮಠ, ಹಿರಿಯ ಶಿಕ್ಷಕ ಗೂಳಪ್ಪ, ಎಸ್.ಮಲ್ಹಾರ, ಹಣಮರೆಡ್ಡಿ ಮೋಟ್ನಳ್ಳಿ, ಸಂಗಾರೆಡ್ಡಿ ಪಾಟೀಲ, ಶೋಭಾ ಸೇರಿದಂತೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>