<p><strong>ವಡಗೇರಾ:</strong> ತಾಲ್ಲೂಕಿನ ಐಕೂರು ಗ್ರಾಮದಲ್ಲಿ ಶುಕ್ರವಾರ ಸಂಜೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮನೆಯಲ್ಲಿ ಇದ್ದ ಧವಸ ಧಾನ್ಯ, ನಗದು ಹಾಗೂ ಬಂಗಾರದ ಆಭರಣಗಳು ಸುಟ್ಟು ಕರಕಲಾಗಿವೆ.</p>.<p>ತಾಲ್ಲೂಕಿನ ಐಕೂರ ಗ್ರಾಮದ ಮಹೆಬೂಬ ನಗರದ ನಿವಾಸಿ ಮೈನೋದ್ದಿನ್ ಮೈಹೆಬೂಬಸಾಬ್ ಮುಲ್ಲಾರವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿ ಮನೆಯಲ್ಲಿ ಇದ್ದ ಸಂಪೂರ್ಣ ವಸ್ತುಗಳು ಸುಟ್ಟು ಭಸ್ಮವಾಗಿವೆ.</p>.<p>ಈ ಘಟನೆಯಲ್ಲಿ ಇತ್ತೀಚಿಗೆ ಹತ್ತಿ ಮಾರಿ ತಂದು ಮನೆಯಲ್ಲಿ ಇಟ್ಟ ಹಾಗೂ ಮಕ್ಕಳು ಬೆಂಗಳೂರಿನಿಂದ ದುಡಿದು ಕಳುಹಿಸಿದ ಹಣ ಒಟ್ಟು ಸುಮಾರು ₹ 5 ಲಕ್ಷ ನಗದು, 20ಗ್ರಾಂ ಬಂಗಾರ ಹಾಗೂ ದಿನನಿತ್ಯದ ಅಗತ್ಯ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.</p>.<p>ಸುದ್ದಿ ತಿಳಿದ ತಕ್ಷಣ ಶಹಾಪುರದಿಂದ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಶ್ರಮಪಟ್ಟು ಬೆಂಕಿಯನ್ನು ನಂದಿಸಿದರು. ಈ ಘಟನೆಯಲ್ಲಿ ಅದೃಷ್ಟವಶಾತ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ</p>.<p>ಘಟನಾ ಸ್ಥಳಕ್ಕೆ ವಡಗೇರಾ ಪೊಲೀಸ್ ಠಾಣೆಯ ಪಿಎಸ್ಐ ಮಹೆಬೂಬ ಅಲಿ ಬೇಟಿ ಕೊಟ್ಟು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ:</strong> ತಾಲ್ಲೂಕಿನ ಐಕೂರು ಗ್ರಾಮದಲ್ಲಿ ಶುಕ್ರವಾರ ಸಂಜೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮನೆಯಲ್ಲಿ ಇದ್ದ ಧವಸ ಧಾನ್ಯ, ನಗದು ಹಾಗೂ ಬಂಗಾರದ ಆಭರಣಗಳು ಸುಟ್ಟು ಕರಕಲಾಗಿವೆ.</p>.<p>ತಾಲ್ಲೂಕಿನ ಐಕೂರ ಗ್ರಾಮದ ಮಹೆಬೂಬ ನಗರದ ನಿವಾಸಿ ಮೈನೋದ್ದಿನ್ ಮೈಹೆಬೂಬಸಾಬ್ ಮುಲ್ಲಾರವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿ ಮನೆಯಲ್ಲಿ ಇದ್ದ ಸಂಪೂರ್ಣ ವಸ್ತುಗಳು ಸುಟ್ಟು ಭಸ್ಮವಾಗಿವೆ.</p>.<p>ಈ ಘಟನೆಯಲ್ಲಿ ಇತ್ತೀಚಿಗೆ ಹತ್ತಿ ಮಾರಿ ತಂದು ಮನೆಯಲ್ಲಿ ಇಟ್ಟ ಹಾಗೂ ಮಕ್ಕಳು ಬೆಂಗಳೂರಿನಿಂದ ದುಡಿದು ಕಳುಹಿಸಿದ ಹಣ ಒಟ್ಟು ಸುಮಾರು ₹ 5 ಲಕ್ಷ ನಗದು, 20ಗ್ರಾಂ ಬಂಗಾರ ಹಾಗೂ ದಿನನಿತ್ಯದ ಅಗತ್ಯ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.</p>.<p>ಸುದ್ದಿ ತಿಳಿದ ತಕ್ಷಣ ಶಹಾಪುರದಿಂದ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಶ್ರಮಪಟ್ಟು ಬೆಂಕಿಯನ್ನು ನಂದಿಸಿದರು. ಈ ಘಟನೆಯಲ್ಲಿ ಅದೃಷ್ಟವಶಾತ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ</p>.<p>ಘಟನಾ ಸ್ಥಳಕ್ಕೆ ವಡಗೇರಾ ಪೊಲೀಸ್ ಠಾಣೆಯ ಪಿಎಸ್ಐ ಮಹೆಬೂಬ ಅಲಿ ಬೇಟಿ ಕೊಟ್ಟು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>