<p><strong>ವಡಗೇರಾ</strong>: ‘ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ತಾಲ್ಲೂಕಿನ ಪ್ರತಿ ಗ್ರಾಮದ ಪ್ರತಿಯೊಬ್ಬರಿಗೆ ತಲುಪಿಸಲು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಸಮಿತಿಯ ಸದಸ್ಯರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು’ ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಖಾಜಾ ಮೈನೋದ್ದೀನ್ ಮಿರ್ಚಿ ಹೇಳಿದರು.</p>.<p>ಪಟ್ಟಣದ ತಾಪಂ ಸಭಾಂಗಣದಲ್ಲಿ ಶುಕ್ರವಾರ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ತಾಲ್ಲೂಕಿನ ವ್ಯಾಪ್ತಿಯಲ್ಲಿ ಸರ್ಕಾರದ ಪಂಚ ಗ್ಯಾರಂಟಿಗಳು ಹಾಗೂ ಯೋಜನೆಗಳು ಯಶಸ್ವಿಯಾಗಬೇಕಾದರೆ ಅಧಿಕಾರಿಗಳು ಪ್ರಾಂಜಲವಾದ ಮನಸ್ಸನಿಂದ ಕಾರ್ಯವನ್ನು ನಿರ್ವಹಿಸಬೇಕು ಆಗ ಮಾತ್ರ ಸರ್ಕಾರಕ್ಕೆ ಹಾಗೂ ಸಮಿತಿಗೆ ಜನರಿಂದ ಗೌರವ ಸಿಗುತ್ತದೆ’ ಎಂದು ಹೇಳಿದರು.</p>.<p>ಸಭೆಯಲ್ಲಿ ತಾಪಂ ಇಒ ಮಲ್ಲಿಕಾರ್ಜುನ ಸಂಗ್ವಾರ, ಸಿಡಿಪಿಒ ಮಲ್ಲಣ್ಣ ದೇಸಾಯಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಿತಿಯ ಸದಸ್ಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.</p>
<p><strong>ವಡಗೇರಾ</strong>: ‘ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ತಾಲ್ಲೂಕಿನ ಪ್ರತಿ ಗ್ರಾಮದ ಪ್ರತಿಯೊಬ್ಬರಿಗೆ ತಲುಪಿಸಲು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಸಮಿತಿಯ ಸದಸ್ಯರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು’ ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಖಾಜಾ ಮೈನೋದ್ದೀನ್ ಮಿರ್ಚಿ ಹೇಳಿದರು.</p>.<p>ಪಟ್ಟಣದ ತಾಪಂ ಸಭಾಂಗಣದಲ್ಲಿ ಶುಕ್ರವಾರ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ತಾಲ್ಲೂಕಿನ ವ್ಯಾಪ್ತಿಯಲ್ಲಿ ಸರ್ಕಾರದ ಪಂಚ ಗ್ಯಾರಂಟಿಗಳು ಹಾಗೂ ಯೋಜನೆಗಳು ಯಶಸ್ವಿಯಾಗಬೇಕಾದರೆ ಅಧಿಕಾರಿಗಳು ಪ್ರಾಂಜಲವಾದ ಮನಸ್ಸನಿಂದ ಕಾರ್ಯವನ್ನು ನಿರ್ವಹಿಸಬೇಕು ಆಗ ಮಾತ್ರ ಸರ್ಕಾರಕ್ಕೆ ಹಾಗೂ ಸಮಿತಿಗೆ ಜನರಿಂದ ಗೌರವ ಸಿಗುತ್ತದೆ’ ಎಂದು ಹೇಳಿದರು.</p>.<p>ಸಭೆಯಲ್ಲಿ ತಾಪಂ ಇಒ ಮಲ್ಲಿಕಾರ್ಜುನ ಸಂಗ್ವಾರ, ಸಿಡಿಪಿಒ ಮಲ್ಲಣ್ಣ ದೇಸಾಯಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಿತಿಯ ಸದಸ್ಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.</p>