<p><strong>ವಡಗೇರಾ</strong>: ‘ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ತಾಲ್ಲೂಕಿನ ಪ್ರತಿ ಗ್ರಾಮದ ಪ್ರತಿಯೊಬ್ಬರಿಗೆ ತಲುಪಿಸಲು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಸಮಿತಿಯ ಸದಸ್ಯರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು’ ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಖಾಜಾ ಮೈನೋದ್ದೀನ್ ಮಿರ್ಚಿ ಹೇಳಿದರು.</p>.<p>ಪಟ್ಟಣದ ತಾಪಂ ಸಭಾಂಗಣದಲ್ಲಿ ಶುಕ್ರವಾರ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ತಾಲ್ಲೂಕಿನ ವ್ಯಾಪ್ತಿಯಲ್ಲಿ ಸರ್ಕಾರದ ಪಂಚ ಗ್ಯಾರಂಟಿಗಳು ಹಾಗೂ ಯೋಜನೆಗಳು ಯಶಸ್ವಿಯಾಗಬೇಕಾದರೆ ಅಧಿಕಾರಿಗಳು ಪ್ರಾಂಜಲವಾದ ಮನಸ್ಸನಿಂದ ಕಾರ್ಯವನ್ನು ನಿರ್ವಹಿಸಬೇಕು ಆಗ ಮಾತ್ರ ಸರ್ಕಾರಕ್ಕೆ ಹಾಗೂ ಸಮಿತಿಗೆ ಜನರಿಂದ ಗೌರವ ಸಿಗುತ್ತದೆ’ ಎಂದು ಹೇಳಿದರು.</p>.<p>ಸಭೆಯಲ್ಲಿ ತಾಪಂ ಇಒ ಮಲ್ಲಿಕಾರ್ಜುನ ಸಂಗ್ವಾರ, ಸಿಡಿಪಿಒ ಮಲ್ಲಣ್ಣ ದೇಸಾಯಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಿತಿಯ ಸದಸ್ಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ</strong>: ‘ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ತಾಲ್ಲೂಕಿನ ಪ್ರತಿ ಗ್ರಾಮದ ಪ್ರತಿಯೊಬ್ಬರಿಗೆ ತಲುಪಿಸಲು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಸಮಿತಿಯ ಸದಸ್ಯರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು’ ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಖಾಜಾ ಮೈನೋದ್ದೀನ್ ಮಿರ್ಚಿ ಹೇಳಿದರು.</p>.<p>ಪಟ್ಟಣದ ತಾಪಂ ಸಭಾಂಗಣದಲ್ಲಿ ಶುಕ್ರವಾರ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ತಾಲ್ಲೂಕಿನ ವ್ಯಾಪ್ತಿಯಲ್ಲಿ ಸರ್ಕಾರದ ಪಂಚ ಗ್ಯಾರಂಟಿಗಳು ಹಾಗೂ ಯೋಜನೆಗಳು ಯಶಸ್ವಿಯಾಗಬೇಕಾದರೆ ಅಧಿಕಾರಿಗಳು ಪ್ರಾಂಜಲವಾದ ಮನಸ್ಸನಿಂದ ಕಾರ್ಯವನ್ನು ನಿರ್ವಹಿಸಬೇಕು ಆಗ ಮಾತ್ರ ಸರ್ಕಾರಕ್ಕೆ ಹಾಗೂ ಸಮಿತಿಗೆ ಜನರಿಂದ ಗೌರವ ಸಿಗುತ್ತದೆ’ ಎಂದು ಹೇಳಿದರು.</p>.<p>ಸಭೆಯಲ್ಲಿ ತಾಪಂ ಇಒ ಮಲ್ಲಿಕಾರ್ಜುನ ಸಂಗ್ವಾರ, ಸಿಡಿಪಿಒ ಮಲ್ಲಣ್ಣ ದೇಸಾಯಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಿತಿಯ ಸದಸ್ಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>