ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಡಿ-ಗದಗ ರೈಲ್ವೆ ಯೋಜನೆ ಹೆಚ್ಚುವರಿ ಜಮೀನಿಗೆ ಬೆಲೆ ನಿಗದಿ

Last Updated 28 ಜನವರಿ 2021, 17:09 IST
ಅಕ್ಷರ ಗಾತ್ರ

ಯಾದಗಿರಿ: ವಾಡಿ-ಗದಗ ರೈಲ್ವೆ ಯೋಜನೆಗಾಗಿ ಸುರಪುರ ಹಾಗೂ ಶಹಾಪುರ ತಾಲ್ಲೂಕಿನ ಹಳ್ಳಿಗಳಲ್ಲಿ ಸ್ವಾಧೀನಪಡಿಸಿದ ಹೆಚ್ಚುವರಿ ಜಮೀನಿಗೆ ಭೂಮಿ ಬೆಲೆಯನ್ನು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ನಿಗದಿಗೊಳಿಸಿದರು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಗುರುವಾರ ನಡೆದ ವಾಡಿ-ಗದಗ ರೈಲ್ವೆ ಯೋಜನೆಗಾಗಿ ಸ್ವಾಧೀನಪಡಿಸಿದ ಜಮೀನಿಗಳಿಗೆ ಭೂ ಬೆಲೆ ನಿರ್ಧರಿಸುವ ಕುರಿತು ನಡೆದ ಸಭೆಯಲ್ಲಿ ಅವರುಮಾತನಾಡಿದರು.

ಸುರಪುರ ತಾಲ್ಲೂಕಿನ ವಿವಿಧ ಹಳ್ಳಿಗಳ 14.28 ಎಕರೆ ಹಾಗೂ ಶಹಾಪುರ ತಾಲ್ಲೂಕಿನ 8.35 ಎಕರೆ ಹೆಚ್ಚುವರಿ ಜಮೀನಿಗೆ ಬೆಲೆ ನಿಗದಿಗಿರುವ ಮಾರ್ಗಸೂಚಿ ಬಳಸಿಕೊಂಡು ಬೆಲೆ ನಿಗದಿಗೊಳಿಸಲಾಗಿದೆ ಎಂದು ತಿಳಿಸಿದರು.

ಬೆಲೆಗಳ ಬಗ್ಗೆ ಜಮೀನಿನ ಮಾಲೀಕರು (ರೈತರು) ಕೇಳಿದ ಪ್ರಶ್ನೆಗಳಿಗೆ ಜಿಲ್ಲಾಧಿಕಾರಿ ಸ್ವವಿಸ್ತಾರವಾಗಿ ವಿವರಿಸಿದರು.

ಇದೇ ಸಂದರ್ಭದಲ್ಲಿ ಭೂಸ್ವಾಧೀನ ಅಧಿಕಾರಿ ಶರಣಪ್ಪ, ರೈಲ್ವೆ ಅಧಿಕಾರಿಗಳು ಸೇರಿದಂತೆ ರೈತರು ಶಹಾಪುರ ಮತ್ತು ಸುರಪುರ ತಾಲ್ಲೂಕಿನ ಅಧಿಕಾರಿಗಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT