<p><strong>ಸೈದಾಪುರ</strong>: ಚರಂಡಿ ಅವ್ಯವಸ್ಥೆಯಿಂದ ಮನೆಯಂಗಳದಲ್ಲಿ ಕೊಳಚೆ ನೀರು, ಮುಳ್ಳು ಗಿಡಗಳಿಂದ ಮುಚ್ಚಿಕೊಂಡ ರಸ್ತೆ ಸೇರಿದಂತೆ ಹಲವು ಸಮಸ್ಯೆಗಳು ವಾರ್ಡ್ ಸಂಖ್ಯೆ-3ರ ಲಕ್ಷ್ಮೀ ನಗರದಲ್ಲಿವೆ.</p><p>ರಸ್ತೆಯನ್ನು ಸಂಪೂರ್ಣವಾಗಿ ಆವರಿಸಿದ ಮುಳ್ಳು ಕಂಟಿಗಳು, ಅಂಬಿಗರ ಚೌಡಯ್ಯ ವೃತ್ತದಿಂದ ಲಕ್ಷ್ಮೀ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದ ಮುಳ್ಳು ಗಿಡಗಳು ಸಂಪೂರ್ಣವಾಗಿ ರಸ್ತೆಯನ್ನು ಆವರಿಸಿಕೊಂಡು ಬಿಟ್ಟಿವೆ. ಇದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ.</p>.<p>ಅವೈಜ್ಞಾನಿಕವಾಗಿ ನಿರ್ಮಿಸಿದ ಚರಂಡಿಯಿಂದ ಚರ್ಚ್ ಹತ್ತಿರ, ಸಿನಿಮಾ ಮಂದಿರದ ಹತ್ತಿರ ಇರುವ ಮನೆಗಳ ಮುಂಭಾಗದಲ್ಲಿ ಕೊಳಚೆ ನೀರು ಸಂಗ್ರಹವಾಗುತ್ತದೆ.</p>.<p>ಮಳೆಗಾಲದಲ್ಲಿ ಈ ಸಮಸ್ಯೆ ಮತ್ತಷ್ಟು ಉಲ್ಬಣವಾಗುತ್ತಿದ್ದು, ಹಲವು ಬಾರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸದಸ್ಯರ ಗಮನಕ್ಕೂ ತಂದರೂ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಜನರು.</p>.<p>ನಿರುಪಯುಕ್ತವಾದ ಟ್ಯಾಂಕ್ಗಳು: 15ನೇ ಹಣಕಾಸು ಯೋಜನೆಯಡಿಯಲ್ಲಿ ನಿರ್ಮಿಸಿದ ನೀರಿನ ಟ್ಯಾಂಕ್ಗಳು ನಿರುಪಯುಕ್ತವಾಗಿವೆ. ವಾರ್ಡನಲ್ಲಿ ಕೇವಲ ಒಂದು ಕೈಪಂಪ್ ಇದೆ. ಎರಡು ಟ್ಯಾಂಕ್ಗಳನ್ನು ಆರು ತಿಂಗಳ ಹಿಂದೆ ನಿರ್ಮಿಸಲಾಗಿದೆ. ಇಲ್ಲಿಯವರೆಗೂ ಅವುಗಳಿಗೆ ನೀರಿನ ಸಂಪರ್ಕ ಕಲ್ಪಿಸಿಲ್ಲ.</p>.<p>ಹಲವಾರು ವರ್ಷಗಳ ಹಿಂದೆ ನಿರ್ಮಿಸಿದ ಸಿ.ಸಿ ರಸ್ತೆ, ಚರಂಡಿಗಳು ಸಂಪೂರ್ಣವಾಗಿ ಹದಗೆಟ್ಟಿವೆ. ಸಿ.ಸಿ ರಸ್ತೆಗಳು ಅಲ್ಲಲ್ಲಿ ಬಿರುಕು ಬಿಟ್ಟು ಸಿಮೆಂಟ್ ಮತ್ತು ಜಲ್ಲಿಕಲ್ಲುಗಳು ಕಿತ್ತಿವೆ. ಇದರಿಂದ ವಾಹನಗಳ ಜನಸಂಚಾರಕ್ಕೆ ತೊಂದರೆಯಾಗಿದೆ.</p>.<p>’ಹತ್ತು ಹಲವು ಸಮಸ್ಯೆಗಳು ಜನರನ್ನು ಕಾಡುತ್ತಿದ್ದರೂ ಸಂಬಂಧಪಟ್ಟ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸದೇ ಕಣ್ಣು ಮುಚ್ಚಿಕುಳಿತಿದ್ದಾರೆ. ಇದು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಹಿಡಿದ ಕೈಗನ್ನಡಿ‘ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.</p>.<p>’ನನ್ನ ಅವಧಿಯಲ್ಲಿ ಸಿ.ಸಿ ರಸ್ತೆ, ಚರಂಡಿಗಳ ದುರಸ್ತಿ ಕಾರ್ಯ ಹಾಗೂ ಜಂಗಲ್ ಕಂಟಿಂಗ್ ಮಾಡಲಾಗಿತ್ತು. ಈಗ ಅವು ನೆನೆಗುದಿಗೆ ಬಿದ್ದಿವೆ. ಈಗಿನ ಸದಸ್ಯರು ಜನರನ್ನು ಸಮಸ್ಯೆಗಳ ಕೂಪಕ್ಕೆ ತಳ್ಳಿದ್ದಾರೆ’ ಎಂದು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರೇಮಸಿಂಗ್ ರಾಠೋಡ ಕಿಡಿಕಾರಿದರು.</p>.<p>’15ನೇ ಹಣಕಾಸು ಯೋಜನೆಯಲ್ಲಿ ಚರಂಡಿಯ ಹೂಳೆತ್ತಲು, ಬೀದಿ ದೀಪಗಳ ನಿರ್ವಹಣೆ ಸೇರಿದಂತೆ ಹಲವು ಸಮಸ್ಯೆಗಳ ಪರಿಹಾರಕ್ಕೆ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿದ್ದಾರೆ. ಆದರೆ ಕೆಲಸ ಮಾತ್ರ ಶೂನ್ಯ’ ಎನ್ನುತ್ತಾರೆ ನಿವಾಸಿ ಅನಿಲ ಕುಮಾರ ಬೆಳಗುಂದಿ.</p>.<p>Quote - ಶೀಘ್ರವೇ ಎಲ್ಲಾ ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡುತ್ತೇನೆ. ಈ ಕುರಿತು ಸಾಮಾನ್ಯಸಭೆಯಲ್ಲಿ ಚರ್ಚೆ ನಡೆಸುತ್ತೇನೆ ಕವಿತಾ ಮಿರಿಯಾಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ </p>.<p>Quote - ಸಾಮಾನ್ಯ ಸಭೆಯಲ್ಲಿ ಈ ಎಲ್ಲಾ ಸಮಸ್ಯೆಗಳ ಬಗ್ಗೆ ಸದಸ್ಯರು ಹೇಳಿದ್ದಾರೆ. ಮುಂದಿನ ಯೋಜನೆ ವರದಿಯಲ್ಲಿ ಸೇರಿಸಿ ಅಧ್ಯಕ್ಷರ ಜೊತೆ ಚರ್ಚಿಸಿ ಪರಿಹರಿಸಲು ಪ್ರಯತ್ನಿಸುತ್ತೇನೆ. ಗಿರಿಮಲ್ಲಣ್ಣ ಗ್ರಾಪಂ ಅಭಿವೃದ್ಧಿ ಅಧಿಕಾರಿ ಸೈದಾಪುರ</p>.<p>Quote - ಪ್ರಸ್ತುತ ಇರುವ 3ನೇ ವಾರ್ಡ್ನ ಗ್ರಾ.ಪಂ ಸದಸ್ಯರು ಜನರನ್ನು ಸಮಸ್ಯೆಗಳ ಕೂಪಕ್ಕೆ ತಳ್ಳಿದ್ದಾರೆ. ಸಮಸ್ಯೆ ಬಗೆಹರಿಸದೇ ಇದ್ದರೆ ಹೋರಾಟ ಮಾಡುತ್ತೇವೆ ಪ್ರೇಮಸಿಂಗ್ ರಾಠೋಡ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೈದಾಪುರ</strong>: ಚರಂಡಿ ಅವ್ಯವಸ್ಥೆಯಿಂದ ಮನೆಯಂಗಳದಲ್ಲಿ ಕೊಳಚೆ ನೀರು, ಮುಳ್ಳು ಗಿಡಗಳಿಂದ ಮುಚ್ಚಿಕೊಂಡ ರಸ್ತೆ ಸೇರಿದಂತೆ ಹಲವು ಸಮಸ್ಯೆಗಳು ವಾರ್ಡ್ ಸಂಖ್ಯೆ-3ರ ಲಕ್ಷ್ಮೀ ನಗರದಲ್ಲಿವೆ.</p><p>ರಸ್ತೆಯನ್ನು ಸಂಪೂರ್ಣವಾಗಿ ಆವರಿಸಿದ ಮುಳ್ಳು ಕಂಟಿಗಳು, ಅಂಬಿಗರ ಚೌಡಯ್ಯ ವೃತ್ತದಿಂದ ಲಕ್ಷ್ಮೀ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದ ಮುಳ್ಳು ಗಿಡಗಳು ಸಂಪೂರ್ಣವಾಗಿ ರಸ್ತೆಯನ್ನು ಆವರಿಸಿಕೊಂಡು ಬಿಟ್ಟಿವೆ. ಇದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ.</p>.<p>ಅವೈಜ್ಞಾನಿಕವಾಗಿ ನಿರ್ಮಿಸಿದ ಚರಂಡಿಯಿಂದ ಚರ್ಚ್ ಹತ್ತಿರ, ಸಿನಿಮಾ ಮಂದಿರದ ಹತ್ತಿರ ಇರುವ ಮನೆಗಳ ಮುಂಭಾಗದಲ್ಲಿ ಕೊಳಚೆ ನೀರು ಸಂಗ್ರಹವಾಗುತ್ತದೆ.</p>.<p>ಮಳೆಗಾಲದಲ್ಲಿ ಈ ಸಮಸ್ಯೆ ಮತ್ತಷ್ಟು ಉಲ್ಬಣವಾಗುತ್ತಿದ್ದು, ಹಲವು ಬಾರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸದಸ್ಯರ ಗಮನಕ್ಕೂ ತಂದರೂ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಜನರು.</p>.<p>ನಿರುಪಯುಕ್ತವಾದ ಟ್ಯಾಂಕ್ಗಳು: 15ನೇ ಹಣಕಾಸು ಯೋಜನೆಯಡಿಯಲ್ಲಿ ನಿರ್ಮಿಸಿದ ನೀರಿನ ಟ್ಯಾಂಕ್ಗಳು ನಿರುಪಯುಕ್ತವಾಗಿವೆ. ವಾರ್ಡನಲ್ಲಿ ಕೇವಲ ಒಂದು ಕೈಪಂಪ್ ಇದೆ. ಎರಡು ಟ್ಯಾಂಕ್ಗಳನ್ನು ಆರು ತಿಂಗಳ ಹಿಂದೆ ನಿರ್ಮಿಸಲಾಗಿದೆ. ಇಲ್ಲಿಯವರೆಗೂ ಅವುಗಳಿಗೆ ನೀರಿನ ಸಂಪರ್ಕ ಕಲ್ಪಿಸಿಲ್ಲ.</p>.<p>ಹಲವಾರು ವರ್ಷಗಳ ಹಿಂದೆ ನಿರ್ಮಿಸಿದ ಸಿ.ಸಿ ರಸ್ತೆ, ಚರಂಡಿಗಳು ಸಂಪೂರ್ಣವಾಗಿ ಹದಗೆಟ್ಟಿವೆ. ಸಿ.ಸಿ ರಸ್ತೆಗಳು ಅಲ್ಲಲ್ಲಿ ಬಿರುಕು ಬಿಟ್ಟು ಸಿಮೆಂಟ್ ಮತ್ತು ಜಲ್ಲಿಕಲ್ಲುಗಳು ಕಿತ್ತಿವೆ. ಇದರಿಂದ ವಾಹನಗಳ ಜನಸಂಚಾರಕ್ಕೆ ತೊಂದರೆಯಾಗಿದೆ.</p>.<p>’ಹತ್ತು ಹಲವು ಸಮಸ್ಯೆಗಳು ಜನರನ್ನು ಕಾಡುತ್ತಿದ್ದರೂ ಸಂಬಂಧಪಟ್ಟ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸದೇ ಕಣ್ಣು ಮುಚ್ಚಿಕುಳಿತಿದ್ದಾರೆ. ಇದು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಹಿಡಿದ ಕೈಗನ್ನಡಿ‘ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.</p>.<p>’ನನ್ನ ಅವಧಿಯಲ್ಲಿ ಸಿ.ಸಿ ರಸ್ತೆ, ಚರಂಡಿಗಳ ದುರಸ್ತಿ ಕಾರ್ಯ ಹಾಗೂ ಜಂಗಲ್ ಕಂಟಿಂಗ್ ಮಾಡಲಾಗಿತ್ತು. ಈಗ ಅವು ನೆನೆಗುದಿಗೆ ಬಿದ್ದಿವೆ. ಈಗಿನ ಸದಸ್ಯರು ಜನರನ್ನು ಸಮಸ್ಯೆಗಳ ಕೂಪಕ್ಕೆ ತಳ್ಳಿದ್ದಾರೆ’ ಎಂದು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರೇಮಸಿಂಗ್ ರಾಠೋಡ ಕಿಡಿಕಾರಿದರು.</p>.<p>’15ನೇ ಹಣಕಾಸು ಯೋಜನೆಯಲ್ಲಿ ಚರಂಡಿಯ ಹೂಳೆತ್ತಲು, ಬೀದಿ ದೀಪಗಳ ನಿರ್ವಹಣೆ ಸೇರಿದಂತೆ ಹಲವು ಸಮಸ್ಯೆಗಳ ಪರಿಹಾರಕ್ಕೆ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿದ್ದಾರೆ. ಆದರೆ ಕೆಲಸ ಮಾತ್ರ ಶೂನ್ಯ’ ಎನ್ನುತ್ತಾರೆ ನಿವಾಸಿ ಅನಿಲ ಕುಮಾರ ಬೆಳಗುಂದಿ.</p>.<p>Quote - ಶೀಘ್ರವೇ ಎಲ್ಲಾ ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡುತ್ತೇನೆ. ಈ ಕುರಿತು ಸಾಮಾನ್ಯಸಭೆಯಲ್ಲಿ ಚರ್ಚೆ ನಡೆಸುತ್ತೇನೆ ಕವಿತಾ ಮಿರಿಯಾಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ </p>.<p>Quote - ಸಾಮಾನ್ಯ ಸಭೆಯಲ್ಲಿ ಈ ಎಲ್ಲಾ ಸಮಸ್ಯೆಗಳ ಬಗ್ಗೆ ಸದಸ್ಯರು ಹೇಳಿದ್ದಾರೆ. ಮುಂದಿನ ಯೋಜನೆ ವರದಿಯಲ್ಲಿ ಸೇರಿಸಿ ಅಧ್ಯಕ್ಷರ ಜೊತೆ ಚರ್ಚಿಸಿ ಪರಿಹರಿಸಲು ಪ್ರಯತ್ನಿಸುತ್ತೇನೆ. ಗಿರಿಮಲ್ಲಣ್ಣ ಗ್ರಾಪಂ ಅಭಿವೃದ್ಧಿ ಅಧಿಕಾರಿ ಸೈದಾಪುರ</p>.<p>Quote - ಪ್ರಸ್ತುತ ಇರುವ 3ನೇ ವಾರ್ಡ್ನ ಗ್ರಾ.ಪಂ ಸದಸ್ಯರು ಜನರನ್ನು ಸಮಸ್ಯೆಗಳ ಕೂಪಕ್ಕೆ ತಳ್ಳಿದ್ದಾರೆ. ಸಮಸ್ಯೆ ಬಗೆಹರಿಸದೇ ಇದ್ದರೆ ಹೋರಾಟ ಮಾಡುತ್ತೇವೆ ಪ್ರೇಮಸಿಂಗ್ ರಾಠೋಡ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>