ಸಚಿವರು ಬಂದಿರುವ ಸುದ್ದಿ ತಿಳಿದು ಜಿಲ್ಲಾಧಿಕಾರಿ ಮತ್ತು ಇತರೆ ಅಧಿಕಾರಿಗಳು ಅಲ್ಲಿಗೆ ದೌಡಾಯಿಸಿದರು.ವಸತಿ ನಿಲಯದಲ್ಲಿ ಸ್ವಚ್ಛತೆಯ ಕೊರತೆ, ಬಿಸಿನೀರು ಹಾಗೂವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶೌಚಾಲಯಗಳ ವ್ಯವಸ್ಥೆ ಇಲ್ಲದಿರುವುದು, ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ವ್ಯವಸ್ಥೆ, ವಿದ್ಯುತ್ ಸಮಸ್ಯೆಯನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.