ಸೋಮವಾರ, 7 ಜುಲೈ 2025
×
ADVERTISEMENT
ADVERTISEMENT

ಯಾದಗಿರಿ: ಬೇಸಿಗೆ ಪ್ರಖರತೆಗೆ ಬೇಕು ಮುನ್ನೆಚ್ಚರಿಕೆ

ಜಿಲ್ಲೆಯಲ್ಲಿವೆ 122 ಗ್ರಾಮ ಪಂಚಾಯಿತಿಗಳು; ಅಭಿವೃದ್ಧಿ ಅಧಿಕಾರಿಗಳಿಗೆ ಅಗ್ನಿ ಪರೀಕ್ಷೆ
Published : 19 ಫೆಬ್ರುವರಿ 2024, 6:09 IST
Last Updated : 19 ಫೆಬ್ರುವರಿ 2024, 6:09 IST
ಫಾಲೋ ಮಾಡಿ
Comments
ಯಾದಗಿರಿ ತಾಲ್ಲೂಕಿನ ಹೊಸಳ್ಳಿ ತಾಂಡಾದಲ್ಲಿ ನೀರಿನ ತೊಟ್ಟಿಯಲ್ಲಿ ನೀರು ಸಂಗ್ರಹಿಸಿರುವುದು
ಯಾದಗಿರಿ ತಾಲ್ಲೂಕಿನ ಹೊಸಳ್ಳಿ ತಾಂಡಾದಲ್ಲಿ ನೀರಿನ ತೊಟ್ಟಿಯಲ್ಲಿ ನೀರು ಸಂಗ್ರಹಿಸಿರುವುದು
ಬಸವರಾಜ ಶರಭೈ
ಬಸವರಾಜ ಶರಭೈ
ಬೇಸಿಗೆಯಲ್ಲಿ ನೀರಿನ ಕೊರತೆ ನೀಗಿಸಲು ಈಗಾಗಲೇ ಟಾಸ್ಕ್‌ ಫೋರ್ಸ್‌ ಸಮಿತಿ ರಚಿಸಲಾಗಿದೆ. ಸ್ಥಳೀಯ ಶಾಸಕರು ಸಭೆ ಮಾಡಿದ್ದಾರೆ. ನೀರಿನ ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ
ಬಸವರಾಜ ಶರಭೈ ತಾಲ್ಲೂಕು ಪಂಚಾಯಿತಿ ಇಒ ಯಾದಗಿರಿ
 ಸೋಮಶೇಖರ ಬಿರಾದಾರ
 ಸೋಮಶೇಖರ ಬಿರಾದಾರ
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ತಾಲ್ಲೂಕಿನಲ್ಲಿ ಸದ್ಯಕ್ಕೆ ಮೇವಿನ ಕೊರತೆ ಇಲ್ಲ
ಸೋಮಶೇಖರ ಬಿರಾದಾರ ತಾಪಂ ಇಒ ಶಹಾಪುರ
ಮಲ್ಲಿಕಾರ್ಜುನ ಸಂಗ್ವಾರ್
ಮಲ್ಲಿಕಾರ್ಜುನ ಸಂಗ್ವಾರ್
ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಪಂಚಾಯಿತಿ ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಸಿಬ್ಬಂದಿ ಉದಾಸೀನತೆ ತೋರಿದರೆ ಕ್ರಮ ಕೈಗೊಳ್ಳಲಾಗುವುದು
ಮಲ್ಲಿಕಾರ್ಜುನ ಸಂಗ್ವಾರ್ ತಾಪಂ ಇಒ ವಡಗೇರಾ
‘ಸದ್ಯ ಕುಡಿಯುವ ನೀರಿನ ಸಮಸ್ಯೆಯಿಲ್ಲ’
ಹುಣಸಗಿ: ತಾಲ್ಲೂಕಿನ 18 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಸದ್ಯ ಕುಡಿಯುವ ನೀರು ಸೇರಿದಂತೆ ನೀರಿನ ಬಳಕೆಗೆ ಯಾವುದೇ ತೊಂದರೆ ಇಲ್ಲ. ಅಂಥ ಪರಿಸ್ಥಿತಿ ಎದುರಾದಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜಯ್ಯ ಸ್ವಾಮಿ ಹಿರೇಮಠ ತಿಳಿಸಿದರು. ತಾಲ್ಲೂಕಿನಲ್ಲಿ ಇಲ್ಲಿಯವರೆಗೂ ಜಲಮೂಲಗಳು ಚೆನ್ನಾಗಿದ್ದು ಕುಡಿಯುವ ನೀರಿನ ಸಮಸ್ಯೆ ಎದುರಾಗಿಲ್ಲ. ಕೆಲ ದಿನಗಳ ಹಿಂದೆ ಅಗತೀರ್ಥ    ಗ್ರಾಮದಲ್ಲಿ ನೀರಿನ ಸಮಸ್ಯೆ ಕಂಡು ಬಂದಿತ್ತು. ಕೊಳವೆಬಾವಿಯ ಮೂಲಕ ನೀರನ್ನು ಗ್ರಾಮಕ್ಕೆ ಸರಬರಾಜು ಮಾಡಲಾಗುತ್ತದೆ. ಆದರೆ ಇನ್ನೂ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವ ಕುರಿತಂತೆ ಅಧಿಕಾರಿಗಳ ಸಭೆ ನಡೆಸಲಾಗಿದೆ ಎಂದು ಹೇಳಿದರು. ಬರದ ಹಿನ್ನೆಲೆಯಲ್ಲಿ ತಾಲ್ಲೂಕಿನ ರೈತರು ಮೇವು ಸಂಗ್ರಹ ಮಾಡಿಕೊಂಡಿದ್ದು ಮೇವಿನ ಕೊರತೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT