<p><strong>ಸುರಪುರ:</strong> ತಾಲ್ಲೂಕಿನ ಮಂಗಿಹಾಳ ಗ್ರಾಮದ ದಲಿತ ಬಡಾವಣೆಯಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾಗಿದೆ. ಗುರುವಾರ ಕೆಟ್ಟು ಹೋಗಿರುವ ಕೊಳವೆಬಾವಿ ಮುಂದೆ ಮಹಿಳೆಯರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು.</p>.<p>ಗ್ರಾಮದ ಹಿರಿಯರಾದ ಮಲ್ಲಮ್ಮ ಮಾತನಾಡಿ, ‘ಸುಮಾರು ದಿನಗಳಿಂದ ಕೊಳೆಬಾವಿ ಕೆಟ್ಟು ಹೋಗಿದೆ. ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ದುರಸ್ತಿ ಮಾಡುವಂತೆ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗೆ ಅನೇಕ ಬಾರಿ ಮನವಿ ಮಾಡಿದರು ಪ್ರಯೋಜನವಾಗಿಲ್ಲ’ ಎಂದು ಆರೋಪಿಸಿದರು.</p>.<p>‘ಬಡಾವಣೆಯಲ್ಲಿ ಒಂದೇ ಕೊಳವೆಬಾವಿ ಇದೆ. ಚರಂಡಿ ನಿರ್ಮಿಸಿಲ್ಲ. ಮಳೆ ನೀರಿನಿಂದ ಕೆಸರು ಗದ್ದೆಯಂತಾಗಿದೆ. ತಗ್ಗು ಗುಂಡಿಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗುತ್ತಿವೆ. ಸಾಂಕ್ರಾಮಿಕ ರೋಗದ ಭೀತಿ ಕಾಡುತ್ತಿದೆ. ಕೂಡಲೇ ಸ್ವಚ್ಛತೆಗೆ ಗಮನ ಹರಿಸಬೇಕು. ಕೊಳವೆಬಾವಿ ದುರಸ್ತಿ ಮಾಡಬೇಕು’ ಎಂದು ಒತ್ತಾಯಿಸಿದರು</p>.<p>ದುರ್ಗಮ್ಮ, ನಾಗಮ್ಮ ಅರಿಕೇರಿ, ಮರೆಮ್ಮ, ನಾಗರತ್ನಾ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ತಾಲ್ಲೂಕಿನ ಮಂಗಿಹಾಳ ಗ್ರಾಮದ ದಲಿತ ಬಡಾವಣೆಯಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾಗಿದೆ. ಗುರುವಾರ ಕೆಟ್ಟು ಹೋಗಿರುವ ಕೊಳವೆಬಾವಿ ಮುಂದೆ ಮಹಿಳೆಯರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು.</p>.<p>ಗ್ರಾಮದ ಹಿರಿಯರಾದ ಮಲ್ಲಮ್ಮ ಮಾತನಾಡಿ, ‘ಸುಮಾರು ದಿನಗಳಿಂದ ಕೊಳೆಬಾವಿ ಕೆಟ್ಟು ಹೋಗಿದೆ. ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ದುರಸ್ತಿ ಮಾಡುವಂತೆ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗೆ ಅನೇಕ ಬಾರಿ ಮನವಿ ಮಾಡಿದರು ಪ್ರಯೋಜನವಾಗಿಲ್ಲ’ ಎಂದು ಆರೋಪಿಸಿದರು.</p>.<p>‘ಬಡಾವಣೆಯಲ್ಲಿ ಒಂದೇ ಕೊಳವೆಬಾವಿ ಇದೆ. ಚರಂಡಿ ನಿರ್ಮಿಸಿಲ್ಲ. ಮಳೆ ನೀರಿನಿಂದ ಕೆಸರು ಗದ್ದೆಯಂತಾಗಿದೆ. ತಗ್ಗು ಗುಂಡಿಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗುತ್ತಿವೆ. ಸಾಂಕ್ರಾಮಿಕ ರೋಗದ ಭೀತಿ ಕಾಡುತ್ತಿದೆ. ಕೂಡಲೇ ಸ್ವಚ್ಛತೆಗೆ ಗಮನ ಹರಿಸಬೇಕು. ಕೊಳವೆಬಾವಿ ದುರಸ್ತಿ ಮಾಡಬೇಕು’ ಎಂದು ಒತ್ತಾಯಿಸಿದರು</p>.<p>ದುರ್ಗಮ್ಮ, ನಾಗಮ್ಮ ಅರಿಕೇರಿ, ಮರೆಮ್ಮ, ನಾಗರತ್ನಾ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>