‘ಸದ್ಯ ಎರಡು ಕೆರೆಯಲ್ಲಿ ಅಲ್ಪ ಪ್ರಮಾಣದ ನೀರು ಸಂಗ್ರಹವಿದೆ. ನೀರು ಖಾಲಿಯಾದರೆ ಅಂತರ್ಜಲಮಟ್ಟ ಕುಸಿತವಾಗಿ ಕೊಳವೆಬಾವಿಯಲ್ಲಿ ನೀರು ಇಲ್ಲದಂತೆ ಆಗುತ್ತದೆ. ಅದರಲ್ಲಿ ಮಾವಿನ ಕೆರೆಯ ಹತ್ತಿರ ಕೆಲ ವ್ಯಕ್ತಿಗಳು ಅಕ್ರಮವಾಗಿ ಟ್ರ್ಯಾಕ್ಟರ್ ಯಂತ್ರ ಬಳಸಿಕೊಂಡು ಸಜ್ಜೆ ಬೆಳೆಗೆ ನೀರುಣಿಸಿರುವ ವಿಷಯ ಗಮನಕ್ಕೆ ಬಂದಿದೆ. ನಮ್ಮ ಸಿಬ್ಬಂದಿ ತೆರಳಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ’ ಎಂದು ಅವರು ಮಾಹಿತಿ ನೀಡಿದರು.