ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾರಾಯಣಪುರ: ಎಡದಂಡೆ ಕಾಲುವೆಗೆ ನೀರು ಸ್ಥಗಿತ

Last Updated 6 ಏಪ್ರಿಲ್ 2021, 14:51 IST
ಅಕ್ಷರ ಗಾತ್ರ

ಹುಣಸಗಿ: ಸಮೀಪದ ನಾರಾಯಣಪುರ ಎಡದಂಡೆ ಕಾಲುವೆಗಳಿಗೆ ನೀರು ಹರಿಸುವುದನ್ನು ಸೋಮವಾರ (ಏ.5) ರಾತ್ರಿಯಿಂದ ಸ್ಥಗಿತಗೊಳಿಸಲಾಗಿದೆ.

ಮೊದಲು ಮಾ. 31 ರವರೆಗೆ ಮಾತ್ರ ನೀರು ಹರಿಸಲು ನಿರ್ಧರಿಸಲಾಗಿತ್ತು.

ಸುರಪುರ ಶಾಸಕ ರಾಜೂಗೌಡ ಅವರು ಉಪ ಮುಖ್ಯಮಂತ್ರಿ, ಐಸಿಸಿ ಸಮಿತಿ ಅಧ್ಯಕ್ಷ ಗೋವಿಂದ ಕಾರಜೋಳ ಅವರನ್ನು ಭೇಟಿ ಮಾಡಿ ಏ.5 ರವರೆಗೂ ನೀರು ಹರಿಸುವಂತೆ ಮನವಿ ಮಾಡಿದ್ದರು. ಆದ್ದರಿಂದ ಏ. 5 ರವರೆಗೂ ನೀರು ಹರಿಸಲಾಯಿತು.

ರೈತರ ಬೆಳೆಗಳು ಕೈಗೆ ಬರಲು ಏ.10 ರವರೆಗೂ ನೀರು ಹರಿಸಬೇಕು ಎಂದು ಹಲವು ಸಂಘಟನೆಗಳು ಹಾಗೂ ಪ್ರಮುಖರು ಮನವಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT