<p><strong>ಸುರಪುರ:</strong> ‘ನಗರದ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಸಮರ್ಪಕವಾಗಿ ಮಾಡಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಶಾಸಕ ರಾಜಾ ವೇಣುಗೋಪಾಲನಾಯಕ ತಾಕೀತು ಮಾಡಿದರು.</p>.<p>ತಾಲ್ಲೂಕಿನ ದೇವಾಪುರ ಗ್ರಾಮದ ಹತ್ತಿರ ನೀರಿನ ಕೊಳವೆ ಮಾರ್ಗ ದುರಸ್ತಿ ಕಾಮಗಾರಿಯನ್ನು ಮಂಗಳವಾರ ಪರಿಶೀಲಿಸಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>‘ಇಲ್ಲಿ ನೀರಿನ ಒತ್ತಡ ಹೆಚ್ಚಾಗಿದೆ. ಕಾಮಗಾರಿ ಹೇಳಿಕೊಳ್ಳುವಷ್ಟು ಸರಿಯಾಗಿಲ್ಲದ ಕಾರಣ ಈ ಕೊಳವೆ ಮಾರ್ಗ ಒಡೆದಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ನೀರಿನ ಒತ್ತಡಕ್ಕೆ ಅನುಗುಣವಾಗಿ ನೀಲನಕ್ಷೆ ತಯಾರಿಸಿ ಕಾಮಗಾರಿ ಕೈಗೆತ್ತಿಕೊಳ್ಳಬೇಕಾಗಿತ್ತು. ಅದೇ ರೀತಿ ಮಾಡಿರುವುದಾಗಿ ನೀವು ಹೇಳುತ್ತಿದ್ದೀರಿ ಕಾರಣ ಡಿಸೈನ್ ತಂದು ನನಗೆ ತೋರಿಸಬೇಕು. ಕಾಮಗಾರಿ ಸೂಕ್ತವಾಗಿ ನಿರ್ವಹಿಸಿ ಮತ್ತೆ ಕೊಳವೆ ಮಾರ್ಗ ಒಡೆಯದಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಮುಂದೆ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗಿ ಹಳ್ಳ ತುಂಬಿ ಹರಿದರೆ ಮತ್ತೆ ಪೈಪ್ ಲೈನ್ ಕಳಚುವ ಸಂಭವವಿದೆ. ಹೀಗಾಗಿ ಹಳ್ಳಕ್ಕೆ ಪಿಲ್ಲರ್ಗಳನ್ನು ಅಳವಡಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು’ ತಿಳಿಸಿದರು.</p>.<p>ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ನಿಗಮದ ಎಇ ಶಂಕರಗೌಡ ಕಾಮಗಾರಿ ಕುರಿತು ಮಾಹಿತಿ ನೀಡಿದರು.</p>.<p>ನಗರಸಭೆ ಉಪಾಧ್ಯಕ್ಷ ರಾಜಾ ಪಿಡ್ಡನಾಯಕ, ಎಇಇ ಶಾಂತಪ್ಪ ಹೂಸೂರು, ಪೌರಾಯುಕ್ತ ಬಸವರಾಜ ಟಣಕೇದಾರ, ನಗರಸಭೆ ಸದಸ್ಯರು, ಸುರಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ ಸೇರಿ ಕಾಂಗ್ರೆಸ್ ಮುಖಂಡರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ‘ನಗರದ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಸಮರ್ಪಕವಾಗಿ ಮಾಡಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಶಾಸಕ ರಾಜಾ ವೇಣುಗೋಪಾಲನಾಯಕ ತಾಕೀತು ಮಾಡಿದರು.</p>.<p>ತಾಲ್ಲೂಕಿನ ದೇವಾಪುರ ಗ್ರಾಮದ ಹತ್ತಿರ ನೀರಿನ ಕೊಳವೆ ಮಾರ್ಗ ದುರಸ್ತಿ ಕಾಮಗಾರಿಯನ್ನು ಮಂಗಳವಾರ ಪರಿಶೀಲಿಸಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>‘ಇಲ್ಲಿ ನೀರಿನ ಒತ್ತಡ ಹೆಚ್ಚಾಗಿದೆ. ಕಾಮಗಾರಿ ಹೇಳಿಕೊಳ್ಳುವಷ್ಟು ಸರಿಯಾಗಿಲ್ಲದ ಕಾರಣ ಈ ಕೊಳವೆ ಮಾರ್ಗ ಒಡೆದಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ನೀರಿನ ಒತ್ತಡಕ್ಕೆ ಅನುಗುಣವಾಗಿ ನೀಲನಕ್ಷೆ ತಯಾರಿಸಿ ಕಾಮಗಾರಿ ಕೈಗೆತ್ತಿಕೊಳ್ಳಬೇಕಾಗಿತ್ತು. ಅದೇ ರೀತಿ ಮಾಡಿರುವುದಾಗಿ ನೀವು ಹೇಳುತ್ತಿದ್ದೀರಿ ಕಾರಣ ಡಿಸೈನ್ ತಂದು ನನಗೆ ತೋರಿಸಬೇಕು. ಕಾಮಗಾರಿ ಸೂಕ್ತವಾಗಿ ನಿರ್ವಹಿಸಿ ಮತ್ತೆ ಕೊಳವೆ ಮಾರ್ಗ ಒಡೆಯದಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಮುಂದೆ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗಿ ಹಳ್ಳ ತುಂಬಿ ಹರಿದರೆ ಮತ್ತೆ ಪೈಪ್ ಲೈನ್ ಕಳಚುವ ಸಂಭವವಿದೆ. ಹೀಗಾಗಿ ಹಳ್ಳಕ್ಕೆ ಪಿಲ್ಲರ್ಗಳನ್ನು ಅಳವಡಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು’ ತಿಳಿಸಿದರು.</p>.<p>ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ನಿಗಮದ ಎಇ ಶಂಕರಗೌಡ ಕಾಮಗಾರಿ ಕುರಿತು ಮಾಹಿತಿ ನೀಡಿದರು.</p>.<p>ನಗರಸಭೆ ಉಪಾಧ್ಯಕ್ಷ ರಾಜಾ ಪಿಡ್ಡನಾಯಕ, ಎಇಇ ಶಾಂತಪ್ಪ ಹೂಸೂರು, ಪೌರಾಯುಕ್ತ ಬಸವರಾಜ ಟಣಕೇದಾರ, ನಗರಸಭೆ ಸದಸ್ಯರು, ಸುರಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ ಸೇರಿ ಕಾಂಗ್ರೆಸ್ ಮುಖಂಡರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>