ನೀರಿನ ಟ್ಯಾಂಕ್ ತೆರವು: ಅವಶೇಷದಡಿ ಸಿಲುಕಿ ಯುವಕ ಸಾವು

ಹುಣಸಗಿ: ತಾಲ್ಲೂಕಿನ ರಾಜನಕೋಳುರ ಗ್ರಾಮದಲ್ಲಿ ಹಳೆಯ ನೀರಿನ ಟ್ಯಾಂಕ್ ತೆರವುಗೊಳಿಸುವ ಸಂದರ್ಭದಲ್ಲಿ ವ್ಯಕ್ತಿಯೊರ್ವ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ತಾಳಿಕೋಟೆ ಮೂಲದ ಖಾಸಗಿ ಗುತ್ತಿಗೆದಾರರಿಂದ ಗ್ರಾಮದಲ್ಲಿರುವ ಹಳೆಯ ನೀರಿನ ಟ್ಯಾಂಕ್ ತೆರವುಗೊಳಿಸುವ ಕಾರ್ಯ ನಡೆದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಮೃತನನ್ನು ಪಶ್ಚಿಮ ಬಂಗಾಳದ ಕಬೀರ್ (30) ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಹುಣಸಗಿ ಸಿಪಿಐ ಪಂಡೀತ್ ಸಗರ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.