ಕಾಲುವೆ ಜಾಲದ ಗೇಟ್ಗಳನ್ನು ಹಾನಿ ಮಾಡುವುದು, ಅನಧಿಕೃತವಾಗಿ ಎಸ್ಕೇಪ್ಗಳ ಮೂಲಕ ಹಳ್ಳಕ್ಕೆ ನೀರು ಹರಿಸುವುದು, ಸೈಪನ್ಗಳ ಮೂಲಕ ಮಣ್ಣಿನ ಏರಿಯಲ್ಲಿ ನೀರನ್ನು ಎತ್ತಿಕೊಳ್ಳುವುದು, ಕಾಲುವೆ ಜಾಲದಲ್ಲಿ ಪಂಪುಗಳ ಮೂಲಕ ನೀರು ಎತ್ತುವುದನ್ನು ನೀರಾವರಿ ಕಾಯ್ದೆಯಡಿ ನಿರ್ಬಂಧಿಸಲಾಗಿದೆ. ಈ ಪರಿಸ್ಥಿತಿ ಕಂಡುಬಂದರೆ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ರೈತರು ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚಿತ ಅಚ್ಚುಕಟ್ಟು ಪ್ರದೇಶದಲ್ಲಿ ಲಘು ನೀರಾವರಿ ಬೆಳೆಗಳನ್ನು ಮಾತ್ರ ಬೆಳೆಯಲು ವಿನಂತಿಸಲಾಗಿದೆ. ನೀರಿನ ಬಳಕೆಯಲ್ಲಿ ಮಿತವ್ಯಯ ಸಾಧಿಸಲು ಹಾಗೂ ಈ ನಿಟ್ಟಿನಲ್ಲಿ ನಿಗಮ ನಿಯಮಿತದ ಅಧಿಕಾರಿಗಳಿಗೆ ಸಹಕಾರ ನೀಡಲು ಕೋರಲಾಗಿದೆ.