‘ನಾಲ್ಕು ದಿನಗಳ ಹಿಂದೆ ಈ ಕುರಿತು ಸಚಿವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಈ ಭಾಗಕ್ಕೆ ನೀರು ಒದಗಿಸುವ ನಿಟ್ಟಿನಲ್ಲಿ ಚರ್ಚಿಸಿದ್ದೆ. ಸೋಮವಾರ ವಿಜಯಪುರದಲ್ಲಿ ಕಾರಜೋಳ ಅವರನ್ನು ಭೇಟಿ ಮಾಡಿ ಮನವಿ ಮಾಡಿದಾಗ ತಕ್ಷಣವೇ ಸ್ಪಂದಿಸಿದ ಸಚಿವರು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿಈ ನಿರ್ಣಯ ಕೈಗೊಂಡರು’ ಎಂದು ತಿಳಿಸಿದರು.
‘ನಾರಾಯಣಪುರ ಮತ್ತು ಆಲಮಟ್ಟಿ ಜಲಾಶಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ಇದೆ. ಹೀಗಾಗಿ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಇರುವವರೆಗೂ ಸತತವಾಗಿ ಚಾಲೂ–ಬಂದಿ ಕ್ರಮ ಕೈಗೊಳ್ಳಬೇಡಿ.ಮುಂಗಾರು ಹಂಗಾಮಿಗೆ ಅಗತ್ಯವೆನಿಸಿದಲ್ಲಿ ಮಾತ್ರ ಸಭೆ ನಡೆಸಿ ಮುಂದಿನ ತೀರ್ಮಾನ ಪ್ರಕಟಿಸುವುದಾಗಿ ಡಿಸಿಎಂ ತಿಳಿಸಿದ್ದಾರೆ’ ಎಂದರು.