ಸದ್ಯಕ್ಕೆ ಉಪವಿಭಾಗಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಡಿಡಿಪಿಯುಹೆಸರು, ಜಿಲ್ಲಾ ಮಲೇರಿಯಾ ಅಧಿಕಾರಿ ಊರಿನ ಹೆಸರು ಸರಿಯಾಗಿ ಬರೆಯಲಾಗಿದೆ. ಇನ್ನೂ ಹಲವು ಅಧಿಕಾರಿಗಳ ಹೆಸರು ಬದಲಾವಣೆ ಮಾಡಬೇಕಾಗಿದೆ. ಕನ್ನಡ ಭಾಷೆಯನ್ನು ಸರಿಯಾಗಿ ಬರೆಯದ ಅಧಿಕಾರಿಗಳ ವಿರುದ್ಧ ಓದುಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವೆಂಬರ್
ತಿಂಗಳಲ್ಲಿ ಕನ್ನಡ ಭಾಷೆಯ ಕೊಲೆ ಮಾಡುವ ರೀತಿಯಲ್ಲಿ ಅಕ್ಷರಗಳನ್ನು ಬಳಸಿರುವುದಕ್ಕೆ ಕನ್ನಡಪರ ಸಂಘಟನೆಗಳು ಸರಿಯಾಗಿ ಜಾಲತಾಣದಲ್ಲಿ ಕನ್ನಡ ಬರೆಯಲು ಆಗ್ರಹಿಸಿದ್ದಾರೆ.