<p><strong>ಹುಣಸಗಿ (ಯಾದಗಿರಿ ಜಿಲ್ಲೆ): </strong>ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ 2.20 ಲಕ್ಷ ಕ್ಯುಸೆಕ್ಗೂ ಅಧಿಕ ಪ್ರಮಾಣದಲ್ಲಿ ಕೃಷ್ಣಾ ನದಿಗೆ ನೀರು ಹರಿಸುತ್ತಿರುವುದರಿಂದ ಕುರಿಗಾಹಿಯೊಬ್ಬರು ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದಾರೆ.</p>.<p>ತಾಲ್ಲೂಕಿನ ನಾರಾಯಣಪುರ ಸಮೀಪದ ಐ.ಬಿ.ತಾಂಡಾದ ಕುರಿಗಾಹಿ ಟೋಪಣ್ಣ ಅವರು ತಂದೆ ಟೀಕಪ್ಪ ಅವರೊಂದಿಗೆ 200ಕ್ಕೂ ಹೆಚ್ಚು ಕುರಿಗಳೊಂದಿಗೆ 8 ದಿನಗಳ ಹಿಂದೆ ನದಿ ಬಳಿಯ ನಡುಗಡ್ಡೆಗೆ ತೆರಳಿದ್ದರು. ಕಳೆದ ಮೂರು ದಿನಗಳ ಹಿಂದೆ ಟೀಕಪ್ಪ ಕೆಲಸ ನಿಮಿತ್ತ ತಮ್ಮ ಮನೆಗೆ ಆಗಮಿಸಿದ್ದಾರೆ.</p>.<p>ಆ ಬಳಿಕ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದ್ದರಿಂದಾಗಿ ನದಿಯ ಮಧ್ಯದಲ್ಲಿರುವ ನಡುಗಡ್ಡೆಯಲ್ಲಿ ಕುರಿಗಳೊಂದಿಗೆಟೋಪಣ್ಣ ಸಿಲುಕಿಕೊಂಡಿದ್ದಾರೆ.</p>.<p>ಶುಕ್ರವಾರ ಸಂಜೆಯಿಂದಲೇ ಆತನ ಮೊಬೈಲ್ ಸ್ವಿಚ್ ಆಫ್ ಆಗಿದೆ.</p>.<p>ಹುಣಸಗಿ ತಹಶೀಲ್ದಾರ್ ವಿನಯ ಕುಮಾರ ಪಾಟೀಲ, ಕಂದಾಯ ನಿರೀಕ್ಷಕ ಬಸವರಾಜ ಬಿರಾದಾರ, ಪಿಎಸ್ಐ ಬಾಷುಮಿಯಾ, ಜಿಲ್ಲಾ ಅಗ್ನಿ ಶಾಮಕದಳದ ಅಧಿಕಾರಿ ಹನುಮಗೌಡ ಪೊಲೀಸ್ ಪಾಟೀಲ ಹಾಗೂ ಸುರಪುರದ ಪ್ರದೀಪ ವಾಲಿ ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದಾರೆ<strong>.</strong></p>.<p><strong>ರಾತ್ರಿ ವೇಳೆಗೆ ಎನ್.ಡಿ.ಆರ್.ಎಫ್ ತಂಡ ಆಗಮನ:</strong> ನಾರಾಯಣಪುರ ಬಳಿ ಕೃಷ್ಣಾ ನದಿಯ ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದ ಕುರಿಗಾಹಿಯನ್ನು ಸುರಕ್ಷಿತವಾಗಿ ಕರೆ ತರಲು ಎಲ್ಲ ಪ್ರಯತ್ನ ಮಾಡಲಾಗುತ್ತಿದೆ ಎಂದು ಸುರಪುರ ಶಾಸಕ ರಾಜೂಗೌಡ ತಿಳಿಸಿದರು.</p>.<p>ಪ್ರಜಾವಾಣಿಯೊಂದಿಗೆ ಮಾತನಾಡಿದ ಅವರು, ಹೈದರಾಬಾದ್ನ ಎನ್.ಡಿ.ಆರ್.ಎಫ್ ಅಧಿಕಾರಿಗಳೊಂಗೆ ಮಾತನಾಡಿದ್ದು, ಶನಿವಾರ ರಾತ್ರಿ ವೇಳೆಗೆ ಸ್ಥಳಕ್ಕೆ ಆಗಮಿಸಲಿದ್ದಾರೆ. ರಾತ್ರಿ ಕಾರ್ಯಾಚರಣೆ ಸಾಧ್ಯವಾಗದಿದ್ದರೆ ಬೆಳಿಗ್ಗೆ ಕುರಿಗಾಹಿಯನ್ನು ಕರೆ ತರಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ (ಯಾದಗಿರಿ ಜಿಲ್ಲೆ): </strong>ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ 2.20 ಲಕ್ಷ ಕ್ಯುಸೆಕ್ಗೂ ಅಧಿಕ ಪ್ರಮಾಣದಲ್ಲಿ ಕೃಷ್ಣಾ ನದಿಗೆ ನೀರು ಹರಿಸುತ್ತಿರುವುದರಿಂದ ಕುರಿಗಾಹಿಯೊಬ್ಬರು ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದಾರೆ.</p>.<p>ತಾಲ್ಲೂಕಿನ ನಾರಾಯಣಪುರ ಸಮೀಪದ ಐ.ಬಿ.ತಾಂಡಾದ ಕುರಿಗಾಹಿ ಟೋಪಣ್ಣ ಅವರು ತಂದೆ ಟೀಕಪ್ಪ ಅವರೊಂದಿಗೆ 200ಕ್ಕೂ ಹೆಚ್ಚು ಕುರಿಗಳೊಂದಿಗೆ 8 ದಿನಗಳ ಹಿಂದೆ ನದಿ ಬಳಿಯ ನಡುಗಡ್ಡೆಗೆ ತೆರಳಿದ್ದರು. ಕಳೆದ ಮೂರು ದಿನಗಳ ಹಿಂದೆ ಟೀಕಪ್ಪ ಕೆಲಸ ನಿಮಿತ್ತ ತಮ್ಮ ಮನೆಗೆ ಆಗಮಿಸಿದ್ದಾರೆ.</p>.<p>ಆ ಬಳಿಕ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದ್ದರಿಂದಾಗಿ ನದಿಯ ಮಧ್ಯದಲ್ಲಿರುವ ನಡುಗಡ್ಡೆಯಲ್ಲಿ ಕುರಿಗಳೊಂದಿಗೆಟೋಪಣ್ಣ ಸಿಲುಕಿಕೊಂಡಿದ್ದಾರೆ.</p>.<p>ಶುಕ್ರವಾರ ಸಂಜೆಯಿಂದಲೇ ಆತನ ಮೊಬೈಲ್ ಸ್ವಿಚ್ ಆಫ್ ಆಗಿದೆ.</p>.<p>ಹುಣಸಗಿ ತಹಶೀಲ್ದಾರ್ ವಿನಯ ಕುಮಾರ ಪಾಟೀಲ, ಕಂದಾಯ ನಿರೀಕ್ಷಕ ಬಸವರಾಜ ಬಿರಾದಾರ, ಪಿಎಸ್ಐ ಬಾಷುಮಿಯಾ, ಜಿಲ್ಲಾ ಅಗ್ನಿ ಶಾಮಕದಳದ ಅಧಿಕಾರಿ ಹನುಮಗೌಡ ಪೊಲೀಸ್ ಪಾಟೀಲ ಹಾಗೂ ಸುರಪುರದ ಪ್ರದೀಪ ವಾಲಿ ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದಾರೆ<strong>.</strong></p>.<p><strong>ರಾತ್ರಿ ವೇಳೆಗೆ ಎನ್.ಡಿ.ಆರ್.ಎಫ್ ತಂಡ ಆಗಮನ:</strong> ನಾರಾಯಣಪುರ ಬಳಿ ಕೃಷ್ಣಾ ನದಿಯ ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದ ಕುರಿಗಾಹಿಯನ್ನು ಸುರಕ್ಷಿತವಾಗಿ ಕರೆ ತರಲು ಎಲ್ಲ ಪ್ರಯತ್ನ ಮಾಡಲಾಗುತ್ತಿದೆ ಎಂದು ಸುರಪುರ ಶಾಸಕ ರಾಜೂಗೌಡ ತಿಳಿಸಿದರು.</p>.<p>ಪ್ರಜಾವಾಣಿಯೊಂದಿಗೆ ಮಾತನಾಡಿದ ಅವರು, ಹೈದರಾಬಾದ್ನ ಎನ್.ಡಿ.ಆರ್.ಎಫ್ ಅಧಿಕಾರಿಗಳೊಂಗೆ ಮಾತನಾಡಿದ್ದು, ಶನಿವಾರ ರಾತ್ರಿ ವೇಳೆಗೆ ಸ್ಥಳಕ್ಕೆ ಆಗಮಿಸಲಿದ್ದಾರೆ. ರಾತ್ರಿ ಕಾರ್ಯಾಚರಣೆ ಸಾಧ್ಯವಾಗದಿದ್ದರೆ ಬೆಳಿಗ್ಗೆ ಕುರಿಗಾಹಿಯನ್ನು ಕರೆ ತರಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>