ಯಾದಗಿರಿ: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸರ್ಕಾರಿ ಪದವಿ ಕಾಲೇಜು ಬಳಿ ಗುರುವಾರ ಸಂಭವಿಸಿದೆ.
ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಜಾಕನಪಲ್ಲಿ ಗ್ರಾಮದ ದೇವಿಂದ್ರಮ್ಮ (40) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ನಾಲ್ಕಾರು ವರ್ಷಗಳ ಹಿಂದೆ ಪತಿ ಸಿದ್ದಪ್ಪ ಸಾಲ ಮಾಡಿ ತೀರಿಕೊಂಡಿದ್ದರು. ಇದೇ ವಿಷಯವಾಗಿ ಮಾನಸಿಕವಾಗಿ ನೊಂದಿದ್ದ ದೇವಿಂದ್ರಮ್ಮ ಗುರುವಾರ ರೈಲಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಎರಡು ದಿನದ ಹಿಂದೆ ಮೈಲಾಪುರ ಮೈಲಾರಲಿಂಗೇಶ್ವರ ಜಾತ್ರೆಗೆ ಮಕ್ಕಳ ಸಮೇತ ಬಂದಿದ್ದರು. ಮೂಲತಃ ಯಾದಗಿರಿ ತಾಲ್ಲೂಕಿನ ಆರ್.ಹೊಸಳ್ಳಿ ಗ್ರಾಮ ತವರು ಮನೆ. ರಾಯಚೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.