ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಹುಣಸಗಿ ಸಮುದಾಯ ಆರೋಗ್ಯ ಕೇಂದ್ರದತ್ತ ಧಾವಿಸಿದ್ದರಿಂದಾಗಿ ಕೆಲಹೊತ್ತು ಆಸ್ಪತ್ರೆ ಜನರಿಂದ ತುಂಬಿತ್ತು. ಗಾಯಾಳುಗಳ, ಕುಟಂಬಸ್ಥರ ಆಕ್ರಂದನ ಹೆಚ್ಚಾಗಿತ್ತು. ವಿಷಯ ತಿಳಿದು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಾಂಗ್ರೆಸ್ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಜಾ ಕುಮಾರ ನಾಯಕ, ಕೆಪಿಸಿಸಿ ಸದಸ್ಯ ಸಿದ್ದಣ್ಣ ಮಲಗಲದಿನ್ನಿ, ಜಿ.ಪಂ. ಮಾಜಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ, ಮಲ್ಲಣ್ಣ ಸಾಹುಕಾರ, ಪಟ್ಟಣ ಪಂಚಾಯಿತಿ ಸದಸ್ಯ ಶರಣು ದಂಡಿನ್, ಸಿದ್ದು ಮುದಗಲ್ಲ, ನಿಂಗರಾಜ ಬಾಚಿಮಟ್ಟಿ, ಬಸವರಾಜ ಸಜ್ಜನ್, ಆರ್.ಎಂ.ರೇವಡಿ, ರವಿ ಮಲಗಲದಿನ್ನಿ ಹಾಗೂ ಇತರರು ಭೇಟಿ ನೀಡಿ ಘಟನೆಯ ಮಾಹಿತಿ ಪಡೆದುಕೊಂಡು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.