ನಂತರ ವೇದನೆ ಹೆಚ್ಚಾಗಿದ್ದರಿಂದ ಮತ್ತೆ ನಗರಕ್ಕೆ ಮರಳಿದ್ದಾರೆ. ಈ ವೇಳೆ ನಗರದ ತರಕಾರಿ ಮಾರುಕಟ್ಟೆಯಲ್ಲಿರುವ ಸಾರ್ವಜನಿಕ ಶೌಚಾಲಯಕ್ಕೆ ಮೂತ್ರ ವಿಸರ್ಜನೆಗೆಂದು ತೆರಳಿದ್ದರು. ಅಲ್ಲಿಯೇ ಮಗುವಿಗೆ ಜನ್ಮ ನೀಡಿದರು. ಶೌಚಾಲಯದ ನಿರ್ವಹಣೆ ಮಾಡುತ್ತಿದ್ದ ಕರಿಷ್ಮಾ ಹೆರಿಗೆ ನೋವು ಶುರುವಾಗುತ್ತಿದ್ದಂತೆ ಹತ್ತಿರದ ಮಹಿಳೆಯರನ್ನು ಕರೆದು ಹೆರಿಗೆ ಮಾಡಿಸಿದರು.