<p><strong>ಶಹಾಪುರ (ಯಾದಗಿರಿ ಜಿಲ್ಲೆ): </strong>ಪ್ರಸವ ವೇದನೆ ತಾಳದೇ ಗರ್ಭಿಣಿಯೊಬ್ಬರು ಶೌಚಕ್ಕೆಂದು ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ್ದಾಗಲೇ ಹೆರಿಗೆಯಾದ ಘಟನೆ ಶನಿವಾರ ಸಂಜೆ ನಗರದ ತರಕಾರಿ ಮಾರುಕಟ್ಟೆಯಲ್ಲಿ ನಡೆದಿದೆ.</p>.<p>ತಾಲೂಕಿನ ಮಡ್ನಾಳ ಗ್ರಾಮದ ಮಂಜುಳಾ ನಾಗಪ್ಪ ಎನ್ನುವ ಮಹಿಳೆ ಸಾರ್ವಜನಿಕ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.</p>.<p>ಬೆಳಿಗ್ಗೆ ಪ್ರಸವ ವೇದನೆ ಕಾಣಿಸಿದ ಹಿನ್ನೆಲೆಯಲ್ಲಿ ಪತಿ ನಾಗಪ್ಪರೊಂದಿಗೆ ನಗರ ಖಾಸಗಿ ಆಸ್ಪತ್ರೆಗೆ ಬಂದು ತಪಾಸಣೆ ಮಾಡಿಸಿಕೊಂಡಿದ್ದಾರೆ. ಹೆರಿಗೆ ಸಮಯಕ್ಕೆ ಸಾಕಷ್ಟು ಕಾಲಾವಕಾಶವಿದೆ ಹೋಗಿ ಎಂದು ವೈದ್ಯರ ಸಲಹೆ ಮೆರೆಗೆ ಗ್ರಾಮಕ್ಕೆ ತೆರಳಿದರು.</p>.<p>ನಂತರ ವೇದನೆ ಹೆಚ್ಚಾಗಿದ್ದರಿಂದ ಮತ್ತೆ ನಗರಕ್ಕೆ ಮರಳಿದ್ದಾರೆ. ಈ ವೇಳೆ ನಗರದ ತರಕಾರಿ ಮಾರುಕಟ್ಟೆಯಲ್ಲಿರುವ ಸಾರ್ವಜನಿಕ ಶೌಚಾಲಯಕ್ಕೆ ಮೂತ್ರ ವಿಸರ್ಜನೆಗೆಂದು ತೆರಳಿದ್ದರು. ಅಲ್ಲಿಯೇ ಮಗುವಿಗೆ ಜನ್ಮ ನೀಡಿದರು. ಶೌಚಾಲಯದ ನಿರ್ವಹಣೆ ಮಾಡುತ್ತಿದ್ದ ಕರಿಷ್ಮಾ ಹೆರಿಗೆ ನೋವು ಶುರುವಾಗುತ್ತಿದ್ದಂತೆ ಹತ್ತಿರದ ಮಹಿಳೆಯರನ್ನು ಕರೆದು ಹೆರಿಗೆ ಮಾಡಿಸಿದರು.</p>.<p>ನಂತರ ಪತಿಯೊಂದಿಗೆ ಸಾರ್ವಜನಿಕ ಆಸ್ಪತ್ರೆಗೆ ತೆರಳಿದ್ದಾರೆ. ಸದ್ಯ ತಾಯಿ ಮಗು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಯಿ, ಮಗು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ (ಯಾದಗಿರಿ ಜಿಲ್ಲೆ): </strong>ಪ್ರಸವ ವೇದನೆ ತಾಳದೇ ಗರ್ಭಿಣಿಯೊಬ್ಬರು ಶೌಚಕ್ಕೆಂದು ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ್ದಾಗಲೇ ಹೆರಿಗೆಯಾದ ಘಟನೆ ಶನಿವಾರ ಸಂಜೆ ನಗರದ ತರಕಾರಿ ಮಾರುಕಟ್ಟೆಯಲ್ಲಿ ನಡೆದಿದೆ.</p>.<p>ತಾಲೂಕಿನ ಮಡ್ನಾಳ ಗ್ರಾಮದ ಮಂಜುಳಾ ನಾಗಪ್ಪ ಎನ್ನುವ ಮಹಿಳೆ ಸಾರ್ವಜನಿಕ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.</p>.<p>ಬೆಳಿಗ್ಗೆ ಪ್ರಸವ ವೇದನೆ ಕಾಣಿಸಿದ ಹಿನ್ನೆಲೆಯಲ್ಲಿ ಪತಿ ನಾಗಪ್ಪರೊಂದಿಗೆ ನಗರ ಖಾಸಗಿ ಆಸ್ಪತ್ರೆಗೆ ಬಂದು ತಪಾಸಣೆ ಮಾಡಿಸಿಕೊಂಡಿದ್ದಾರೆ. ಹೆರಿಗೆ ಸಮಯಕ್ಕೆ ಸಾಕಷ್ಟು ಕಾಲಾವಕಾಶವಿದೆ ಹೋಗಿ ಎಂದು ವೈದ್ಯರ ಸಲಹೆ ಮೆರೆಗೆ ಗ್ರಾಮಕ್ಕೆ ತೆರಳಿದರು.</p>.<p>ನಂತರ ವೇದನೆ ಹೆಚ್ಚಾಗಿದ್ದರಿಂದ ಮತ್ತೆ ನಗರಕ್ಕೆ ಮರಳಿದ್ದಾರೆ. ಈ ವೇಳೆ ನಗರದ ತರಕಾರಿ ಮಾರುಕಟ್ಟೆಯಲ್ಲಿರುವ ಸಾರ್ವಜನಿಕ ಶೌಚಾಲಯಕ್ಕೆ ಮೂತ್ರ ವಿಸರ್ಜನೆಗೆಂದು ತೆರಳಿದ್ದರು. ಅಲ್ಲಿಯೇ ಮಗುವಿಗೆ ಜನ್ಮ ನೀಡಿದರು. ಶೌಚಾಲಯದ ನಿರ್ವಹಣೆ ಮಾಡುತ್ತಿದ್ದ ಕರಿಷ್ಮಾ ಹೆರಿಗೆ ನೋವು ಶುರುವಾಗುತ್ತಿದ್ದಂತೆ ಹತ್ತಿರದ ಮಹಿಳೆಯರನ್ನು ಕರೆದು ಹೆರಿಗೆ ಮಾಡಿಸಿದರು.</p>.<p>ನಂತರ ಪತಿಯೊಂದಿಗೆ ಸಾರ್ವಜನಿಕ ಆಸ್ಪತ್ರೆಗೆ ತೆರಳಿದ್ದಾರೆ. ಸದ್ಯ ತಾಯಿ ಮಗು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಯಿ, ಮಗು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>